ದೇಶ

ಜೆಎನ್ ಯು ವಿದ್ಯಾರ್ಥಿ ನಜೀಬ್ ಅಹ್ಮದ್ ಅಲೀಘರ್ ನಲ್ಲಿ ಪತ್ತೆ: ಪೊಲೀಸರಿಗೆ ಪತ್ರ ಬರೆದ ಮಹಿಳೆ

ಜವಾಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ನಜೀಬ್ ಅಹ್ಮದ್ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು ದೊರೆತಿದೆ.

ನವದೆಹಲಿ: ಜವಾಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ನಜೀಬ್ ಅಹ್ಮದ್ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು ದೊರೆತಿದೆ. ನ.14ರಂದು ಜೆಎನ್ ಯುವಿನ ಮಾಹಿ-ಮಾಂಡವಿ ಹಾಸ್ಟೆಲ್ ಗೆ ಅನಾಮಿಕ ಪತ್ರವೊಂದು ಬಂದಿದ್ದು, ಈ ಬಗ್ಗೆ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. 
ಪೊಲೀಸ್ ಅಧಿಕಾರಿಗಳ ಈಗಿನ ಮಾಹಿತಿ ಪ್ರಕಾರ, ಅಲೀಘರ್ ನಿಂದ ಮಹಿಳೆಯೊಬ್ಬರು ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದ್ದು ಈ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ನಜೀಬ್ ಅಹ್ಮದ್ ನ್ನು ಅಲೀಘರ್ ನ ಮಾರುಕಟ್ಟೆಯಲ್ಲಿ ನೋಡಿರುವುದಾಗಿ ಪತ್ರ ಬರೆದಿರುವ ಮಹಿಳೆ ತಿಳಿಸಿದ್ದಾರೆ. ನಜೀಬ್ ಅಹ್ಮದ್ ಅವರನ್ನುದ್ದೇಶಿಸಿ ಪತ್ರ ಬರೆಯಲಾಗಿದೆ. ಪತ್ರವನ್ನು ಸ್ವೀಕರಿಸಿರುವ ಹಾಸ್ಟೆಲ್ ಅಧ್ಯಕ್ಷ ಅಜೀಮ್ ಅದನ್ನು ನಜೀಬ್ ಅಹ್ಮದ್ ಅವರ ತಾಯಿಗೆ ನೀಡಿದ್ದು, ಈಗ ಕ್ರೈಂ ಬ್ರಾಂಚ್ ಕೈಸೇರಿದೆ. 
ನಾಪತ್ತೆಯಾಗಿರುವ ನಜೀಬ್ ಅಹ್ಮದ್ ಬಂಧನದಿಂದ ತಪ್ಪಿಸಿಕೊಂಡು ಬಂದಿರುವುದಾಗಿ ತಿಳಿಸಿದ್ದಾನೆ ಅಷ್ಟೇ ಅಲ್ಲದೇ, ಪತ್ರ ಬರೆದ ಮಹಿಳೆಯ ಸಹಾಯವನ್ನೂ ಕೋರಿದ್ದ ಎಂದು ಪತ್ರದಲ್ಲಿ ತಿಳಿಸಲಾಗಿದ್ದು, ಆಕೆಯನ್ನು ಸಂಪರ್ಕಿಸಬಹುದಾದ ವಿಳಾಸವನ್ನೂ ಮಹಿಳೆ ತಿಳಿಸಿದ್ದಾರೆ.      
ಪತ್ರದಲ್ಲಿ ತಿಳಿಸಲಾಗಿದ್ದ ವಿಳಾಸಕ್ಕೆ ಕ್ರೈಮ್ ಬ್ರಾಂಚ್ ಪೊಲೀಸರು ಭೇಟಿ ನೀಡಿದ್ದಾರೆ. ಆದರೆ ಆ ವಿಳಾಸದಲ್ಲಿ ಯಾರೂ ಇರಲಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮಹಿಳೆ ಬರೆದಿರುವ ಪತ್ರದಲ್ಲಿ ನಜೀಬ್ ಅಹ್ಮದ್ ನ್ನು ಬಂಧಿಸಿಡಲಾಗಿದ್ದ ಸ್ಥಳದ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ. ಇನ್ನು ಇದೇ ವೇಳೆ ಜೆಎನ್ ಯು ವಿವಿಯಿಂದ ನಾಪತ್ತೆಯಾದ ನಂತರ ಅಹ್ಮದ್ ಜಮಿಯಾ ಮಿಲಿಯಾ ಇಸ್ಲಾಮಿಯಾ ವಿವಿ ಕ್ಯಾಂಪಸ್ ಗೆ ಭೇಟಿ ನೀಡಿರುವ ಬಗ್ಗೆ ಸಿಸಿಟಿವಿ ಫುಟೇಜ್ ನ್ನು ವಿಶ್ವವಿದ್ಯಾನಿಲಯ ಪೊಲೀಸರಿಗೆ ಹಸ್ತಾಂತರಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT