ಇಂದೋರ್-ಪಾಟ್ನಾ ರೈಲು ದುರಂತ 
ದೇಶ

ಪಾಟ್ನಾ-ಇಂದೋರ್ ರೈಲು ದುರಂತ: 115ಕ್ಕೇರಿದ ಸಾವಿನ ಸಂಖ್ಯೆ, ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ

ಭಾನುವಾರ ಮುಂಜಾನೆ ಉತ್ತರ ಪ್ರದೇಶದಲ್ಲಿ ಸಂಭವಿಸಿದ ಇಂದೋರ್-ಪಾಟ್ನಾ ರೈಲು ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 115ಕ್ಕೇರಿದ್ದು, ಗಾಯಾಳು ಸಂಖ್ಯೆ 200 ದಾಟಿದೆ.

ಲಖನೌ: ಭಾನುವಾರ ಮುಂಜಾನೆ ಉತ್ತರ ಪ್ರದೇಶದಲ್ಲಿ ಸಂಭವಿಸಿದ ಇಂದೋರ್-ಪಾಟ್ನಾ ರೈಲು ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 115ಕ್ಕೇರಿದ್ದು, ಗಾಯಾಳುಗಳ ಸಂಖ್ಯೆ 200 ದಾಟಿದೆ.

ಉತ್ತರ ಪ್ರದೇಶದ ಕಾನ್ಪುರದ ಪುಖರಾಯ ರೈಲ್ವೇ ನಿಲ್ದಾಣದ ಬಳಿ ದುರಂತ ಸಂಭವಿಸಿದ್ದು, ಒಟ್ಟು 14 ಬೋಗಿಗಳ ಪೈಕಿ 2 ಎಸಿ ಬೋಗಿಗಳು ನಜ್ಜುಗುಜ್ಜಾಗಿದೆ. ರೈಲಿನ ವೇಗ ಮತ್ತು ಅಪಘಾತದ ರಭಸಕ್ಕೆ ಎಸಿ ಬೋಗಿಯ ಹಿಂದೆ ಇದ್ದ ಎಸ್ ಸರಣಿಯ ಬೋಗಿಗಳು ಕೂಡ ಜಖಂ ಆಗಿದ್ದು, ಈ ಬೋಗಿಗಳಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೂಲಗಳ ಪ್ರಕಾರ ಅಪಘಾತದ ರಭಸಕ್ಕೆ ಭೋಗಿಗಳು ಒಂದಕ್ಕೊಂದು ಬಡಿದಿದ್ದು, ಭೋಗಿಗಳನ್ನು ಬೇರ್ಪಡಿಸಲು ಗ್ಯಾಸ್ ಕಟರ್ ಬಳಕೆ ಮಾಡಲಾಗುತ್ತಿದೆ.

ಇನ್ನು ನಜ್ಜುಗುಜ್ಜಾದ ಭೋಗಿಗಳನ್ನು ಬೇರ್ಪಡಿಸುವ ಕಾರ್ಯ ಭರದಿಂದ ಸಾಗಿದ್ದು, ಭೋಗಿಗಳಲ್ಲಿ ಮತ್ತಷ್ಟು ಶವಗಳಿರುವ ಕುರಿತು ಶಂಕೆ ವ್ಯಕ್ತವಾಗುತ್ತಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಈ ವರೆಗೂ ಅಪಘಾತದಲ್ಲಿ ಗಂಭೀರವಾಗಿ ಹಾನಿಯಾದ ಭೋಗಿಗೆ ರಕ್ಷಣಾ ಸಿಬ್ಬಂದಿಗಳು ಪ್ರವೇಶಿಸಲು ಸಾಧ್ಯವಾಗಿಲ್ಲ ಎಂದು ತಿಳಿದುಬಂದಿದೆ. ಹೀಗಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ಕ್ರೇನ್ ಗಳ ಸಹಾಯ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ರೈಲ್ವೇ ಅಧಿಕಾರಿಗಳು ಈಗಾಗಲೇ ದೌಡಾಯಿಸಿದ್ದು, ದುರಂತಕ್ಕೆ ಸಂಬಂಧಿಸಿದಂತೆ ಕೇಂದ್ರ ರೈಲ್ವೇ ಸಚಿವ ಸುರೇಶ್ ಪ್ರಭು ಅವರು ಅಧಿಕಾರಿಗಳಿಂದ ತತ್ ಕ್ಷಣದ ಮಾಹಿತಿಗಳನ್ನು ಪಡೆಯುತ್ತಿದ್ದಾರೆ. ಹಳಿಯಲ್ಲಿನ ಲೋಪವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದು, ಹಳಿಯಲ್ಲಿ ಲೋಪಕ್ಕೆ ಕಾರಣ ಏನು ಎಂದು ತನಿಖೆ ನಡೆಸಲಾಗುತ್ತಿದೆ.

ಕಳೆದ ಮಾರ್ಚ್ ನಲ್ಲಷ್ಟೇ ಉತ್ತರ ಪ್ರದೇಶದಲ್ಲಿ ರೈಲು ದುರಂತವೊಂದು ಸಂಭವಿಸಿ 39 ಮಂದಿ ಧಾರುಣ ಸಾವಿಗೀಡಾಗಿ 150 ಮಂದಿ ಗಾಯಗೊಂಡಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ.

ಇದುವರೆಗೆ ಸಾವಿಗೀಡಾದವರಲ್ಲಿ 43 ಮಂದಿಯಲ್ಲಿ 20 ಮಂದಿ ಉತ್ತರ ಪ್ರದೇಶ, 15 ಮಂದಿಯನ್ನು ಮಧ್ಯ ಪ್ರದೇಶ, 6 ಮಂದಿ ಬಿಹಾರ ಮತ್ತು ತಲಾ ಒಬ್ಬೊಬ್ಬರು ಮಹಾರಾಷ್ಟ್ರ ಹಾಗೂ ಬಿಹಾರದವರೆಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT