ಸಂಗ್ರಹ ಚಿತ್ರ 
ದೇಶ

ಸಮುದ್ರದಲ್ಲೇ ಮೀನುಗಾರಿಕಾ ಬೋಟ್ ಗೆ ಬೆಂಕಿ; 1 ಸಾವು. ನಾಲ್ವರ ರಕ್ಷಣೆ

ಸಮುದ್ರ ಮಧ್ಯೆ ಮೀನುಗಾರಿಕೆ ನಡೆಸುತ್ತಿರುವಾಗಲೇ ಬೋಟ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಓರ್ವ ಮೀನುಗಾರ ಸಾವಿಗೀಡಾದ ಭೀಕರ ಘಟನೆ ಗುಜರಾತ್ ಕರಾವಳಿಯಲ್ಲಿ ನಡೆದಿದೆ.

ಅಹ್ಮದಾಬಾದ್: ಸಮುದ್ರ ಮಧ್ಯೆ ಮೀನುಗಾರಿಕೆ ನಡೆಸುತ್ತಿರುವಾಗಲೇ ಬೋಟ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಓರ್ವ ಮೀನುಗಾರ ಸಾವಿಗೀಡಾದ ಭೀಕರ ಘಟನೆ ಗುಜರಾತ್ ಕರಾವಳಿಯಲ್ಲಿ ನಡೆದಿದೆ.

ಗುಜರಾತ್ ನ ಪೋರ್ ಬಂದರ್ ಸಮೀಪ ಅರೇಬಿಯನ್ ಸಮುದ್ರದಲ್ಲಿ ಈ ಘಟನೆ ನಡೆದಿದ್ದು, ಕೃಷ್ಣರಾಜ್ ಎಂಬ ಮೀನುಗಾರಿಕಾ ಬೋಟ್ ಮೀನು ಹಿಡಿಯುವುದರಲ್ಲಿ ತೊಡಗಿದ್ದಾಗ ದಿಢೀರನೇ ಬೋಟ್ ಗೆ ಬೆಂಕಿ ತಗುಲಿದೆ. ಬೆಂಕಿಯ ಕೆನ್ನಾಲಿಗೆ ಓರ್ವ ಮೀನುಗಾರ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ಭಾರತೀಯ ನೌಕಾದಳ (ಇಂಡಿಯನ್ ಕೋಸ್ಟಲ್ ಗಾರ್ಡ್ಸ್-ಐಸಿಜಿ) ಬೋಟ್ ನಲ್ಲಿ ಇತರೆ ನಾಲ್ವರನ್ನು  ರಕ್ಷಿಸಿದ್ದಾರೆ.

ನೌಕಾಪಡೆಯ ಆರುಷ್ ಎಂಬ ಬೋಟ್ ಮೂಲಕ ಯೋಧರು ತುರ್ತಾಗಿ ತೆರಳಿದ್ದು, ಆಪಾಯದಲ್ಲಿ ಸಿಲುಕಿದ್ದ ನಾಲ್ಕು ಮಂದಿ ಮೀನುಗಾರರನ್ನು ರಕ್ಷಿಸಿದ್ದಾರೆ. ಪೋರ್ ಬಂದರ್ ನಿಂದ ದುರಂತಕ್ಕೀಡಾದ ಬೋಟ್ ಸುಮಾರು 14  ನಾಟಿಕಲ್ ಮೈಲು ದೂರದಲ್ಲಿತ್ತು ಎಂದು ಕರಾವಳಿ ಭದ್ರತಾ ಪಡೆ ಮಾಹಿತಿ ನೀಡಿದೆ.ರಕ್ಷಣಾ ಕಾರ್ಯಾಚರಣೆಗೆ ಅಲ್ಲೇ ಮೀನುಗಾರಿಕೆ ನಡೆಸುತ್ತಿದ್ದ ಇತರೆ ಬೋಟ್ ಗಳು ಸಾಥ್ ನೀಡಿದವು ಎಂದು ತಿಳಿದುಬಂದಿದೆ. ನಾಲ್ವರ ಪೈಕಿ  ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ದುರಂತಕ್ಕೀಡಾದ ಬೋಟ್ ಅನ್ನು ದಿಕ್ಸಾ ಎಂಬ ಟೋಯಿಂಗ್ ಬೋಟ್ ಮೂಲಕ ದಡಕ್ಕೆ ಎಳೆದು ತರಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕೊಪ್ಪಳದ ಗಂಗಾವತಿಯಲ್ಲಿ ಹರಿಯಿತು ನೆತ್ತರು: BJP ಯುವ ಮೋರ್ಚಾ ಅಧ್ಯಕ್ಷನ ಬರ್ಬರ ಹತ್ಯೆ

ಮಧ್ಯಪ್ರದೇಶ: ಕಾಫ್ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯ; ಚಿಕಿತ್ಸೆ ಪಡೆಯುತ್ತಿದ್ದ 6 ಮಕ್ಕಳ ಮರಣ; ಸಾವಿನ ಸಂಖ್ಯೆ 20ಕ್ಕೆ ಏರಿಕೆ

BiggBoss Kannada: ಬಿಗ್ ಬಾಸ್ 12 ಮನೆಗೆ ಬೀಗಮುದ್ರೆ, ಜಾಲಿವುಡ್ ಸ್ಟುಡಿಯೋಸ್ ಇಂದು ಹೈಕೋರ್ಟ್ ಮೊರೆ?

ರಾಜಕೀಯ ಒತ್ತಡಕ್ಕೆ ಮಣಿದು ಆತುರಾತುರವಾಗಿ ಸಮೀಕ್ಷೆ ನಡೆಸುತ್ತಿದ್ದಾರೆ: BJP ಟೀಕೆ

ನಮ್ಮ ಮೆಟ್ರೋಗೆ ವಾಲ್ಮೀಕಿ ಹೆಸರಿಡಲು ಕೇಂದ್ರಕ್ಕೆ ಒತ್ತಾಯ: ಸಿಎಂ ಸಿದ್ದರಾಮಯ್ಯ

SCROLL FOR NEXT