ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ 
ದೇಶ

ರೈಲು ದುರಂತ: ಸಂತ್ರಸ್ತರಿಗೆ ಕೇಂದ್ರದಿಂದ ರು 3.5, ರಾಜ್ಯದಿಂದ ರು.5 ಲಕ್ಷ ಪರಿಹಾರ

ಉತ್ತರಪ್ರದೇಶದ ಪುಖರಾಯಾ ಬಳಿ ಸಂಭವಿಸಿದ ಭೀಕರ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟಂಬಕ್ಕೆ ಕೇಂದ್ರ ಸರ್ಕಾರದ ವತಿಯಿಂದ ರು.3.5 ಲಕ್ಷ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ವತಿಯಿಂದ ರು.5 ಲಕ್ಷ ಪರಿಹಾರ ಹಣವನ್ನು...

ನವದೆಹಲಿ: ಉತ್ತರಪ್ರದೇಶದ ಪುಖರಾಯಾ ಬಳಿ ಸಂಭವಿಸಿದ ಭೀಕರ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟಂಬಕ್ಕೆ ಕೇಂದ್ರ ಸರ್ಕಾರದ ವತಿಯಿಂದ ರು.3.5 ಲಕ್ಷ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ವತಿಯಿಂದ ರು.5 ಲಕ್ಷ ಪರಿಹಾರ ಹಣವನ್ನು ಭಾನುವಾರ ಘೋಷಣೆ ಮಾಡಲಾಗಿದೆ.

ಘಟನೆ ಕುರಿತಂತೆ ತೀವ್ರ ಸಂತಾಪ ಸೂಚಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು, ಮೃತರ ಕುಟುಂಬಗಳಿಗೆ ಪರಿಹಾರ ಹಣವನ್ನು ಘೋಷಣೆ ಮಾಡಿದ್ದಾರೆ. ಮೃತರ ಕುಟುಂಬಕ್ಕೆ ರು.5 ಲಕ್ಷ, ಗಂಭೀರವಾಗಿ ಗಾಯಗೊಂಡಿರುವವರಿಗೆ ರು. 50,000 ಹಣ ಹಾಗೂ ಸಣ್ಣಪುಟ್ಟ ಗಾಯವಾಗಿರುವವರಿಗೆ ರು.25,000 ಧನವನ್ನು ನೀಡುವುದಾಗಿ ಹೇಳಿದ್ದಾರೆ.

ಕೇಂದ್ರ ರೈಲ್ವೆ ಸಚಿವರು ಕೂಡ ಪರಿಹಾರ ಧನವನ್ನು ಘೋಷಣೆ ಮಾಡಿದ್ದು, ಮೃತರ ಕುಟುಂಬಗಳಿಗೆ ರು..3.5 ಲಕ್ಷ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ರು. 50,000 ಹಾಗೂ ಸಣ್ಣ ಪುಟ್ಟ ಗಾಯವಾದವರಿಗೆ ರು.25,000 ಹಣವನ್ನು ಘೋಷಣೆ ಮಾಡಿದ್ದಾರೆ.

ಅಲ್ಲದೆ, ಘಟನಾ ಸ್ಥಳಕ್ಕೆ ರೈಲ್ವೆ ರಕ್ಷಣಾ ಪಡೆ ಹಾಗೂ ರೈಲ್ವೆ ಆರೋಗ್ಯ ಸೇವಾ ಸಿಬ್ಬಂದಿಗಳನ್ನು ಕಳುಹಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗುವಂತೆ ಆದೇಶಿಸಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT