ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ 
ದೇಶ

ರೈಲು ದುರಂತ: ಸಂತ್ರಸ್ತರಿಗೆ ಕೇಂದ್ರದಿಂದ ರು 3.5, ರಾಜ್ಯದಿಂದ ರು.5 ಲಕ್ಷ ಪರಿಹಾರ

ಉತ್ತರಪ್ರದೇಶದ ಪುಖರಾಯಾ ಬಳಿ ಸಂಭವಿಸಿದ ಭೀಕರ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟಂಬಕ್ಕೆ ಕೇಂದ್ರ ಸರ್ಕಾರದ ವತಿಯಿಂದ ರು.3.5 ಲಕ್ಷ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ವತಿಯಿಂದ ರು.5 ಲಕ್ಷ ಪರಿಹಾರ ಹಣವನ್ನು...

ನವದೆಹಲಿ: ಉತ್ತರಪ್ರದೇಶದ ಪುಖರಾಯಾ ಬಳಿ ಸಂಭವಿಸಿದ ಭೀಕರ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟಂಬಕ್ಕೆ ಕೇಂದ್ರ ಸರ್ಕಾರದ ವತಿಯಿಂದ ರು.3.5 ಲಕ್ಷ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ವತಿಯಿಂದ ರು.5 ಲಕ್ಷ ಪರಿಹಾರ ಹಣವನ್ನು ಭಾನುವಾರ ಘೋಷಣೆ ಮಾಡಲಾಗಿದೆ.

ಘಟನೆ ಕುರಿತಂತೆ ತೀವ್ರ ಸಂತಾಪ ಸೂಚಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು, ಮೃತರ ಕುಟುಂಬಗಳಿಗೆ ಪರಿಹಾರ ಹಣವನ್ನು ಘೋಷಣೆ ಮಾಡಿದ್ದಾರೆ. ಮೃತರ ಕುಟುಂಬಕ್ಕೆ ರು.5 ಲಕ್ಷ, ಗಂಭೀರವಾಗಿ ಗಾಯಗೊಂಡಿರುವವರಿಗೆ ರು. 50,000 ಹಣ ಹಾಗೂ ಸಣ್ಣಪುಟ್ಟ ಗಾಯವಾಗಿರುವವರಿಗೆ ರು.25,000 ಧನವನ್ನು ನೀಡುವುದಾಗಿ ಹೇಳಿದ್ದಾರೆ.

ಕೇಂದ್ರ ರೈಲ್ವೆ ಸಚಿವರು ಕೂಡ ಪರಿಹಾರ ಧನವನ್ನು ಘೋಷಣೆ ಮಾಡಿದ್ದು, ಮೃತರ ಕುಟುಂಬಗಳಿಗೆ ರು..3.5 ಲಕ್ಷ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ರು. 50,000 ಹಾಗೂ ಸಣ್ಣ ಪುಟ್ಟ ಗಾಯವಾದವರಿಗೆ ರು.25,000 ಹಣವನ್ನು ಘೋಷಣೆ ಮಾಡಿದ್ದಾರೆ.

ಅಲ್ಲದೆ, ಘಟನಾ ಸ್ಥಳಕ್ಕೆ ರೈಲ್ವೆ ರಕ್ಷಣಾ ಪಡೆ ಹಾಗೂ ರೈಲ್ವೆ ಆರೋಗ್ಯ ಸೇವಾ ಸಿಬ್ಬಂದಿಗಳನ್ನು ಕಳುಹಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗುವಂತೆ ಆದೇಶಿಸಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT