ದೇಶ

ಶ್ರೀನಗರದಲ್ಲಿ ದಟ್ಟ ಮಂಜು; ವಿಮಾನಗಳ ಹಾರಾಟ ರದ್ದು

Manjula VN

ಶ್ರೀನಗರ: ಶ್ರೀನಗರ ಮತ್ತು ಹತ್ತಿರದ ಪ್ರದೇಶಗಳಲ್ಲಿ ಸೋಮವಾರ ಬೆಳಗ್ಗೆ ದಟ್ಟ ಮಂಜು ಕವಿದಿರುವ ಕಾರಣ ಹಲವಾರು ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ದಟ್ಟ ಮಂಜಿನ ವಾತಾವರಣದಿಂದಾಗಿ ಶ್ರೀನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಲ್ಲಾ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಾದ್ಯಂತ ಮಳೆ ಹಾಗೂ ಮಂಜು ಸುರಿಯಲಿದ್ದು, ಮುಂದಿನ 24 ಗಂಟೆಗಳ ಕಾಲ ಶೀತಮಯ ವಾತಾವರಣವಿರಲಿದೆ ಎಂದು ಹಮಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ವಿಮಾನ ಹಾರಾಟಕ್ಕೆ ಸಮಸ್ಯೆ ಎದುರಾಗಿದ್ದು, ಎಲ್ಲಾ ವಿಮಾನಗಳ ಹಾರಾಟವನ್ನು ರದ್ದು ಮಾಡಲಾಗಿದೆ. ಹವಾಮಾನ ಪರಿಸ್ಥಿತಿಯಂತೆ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

SCROLL FOR NEXT