ಸಾಂದರ್ಭಿಕ ಚಿತ್ರ 
ದೇಶ

ದಿಲ್ ಸುಖ್ ನಗರ ಅವಳಿ ಸ್ಫೋಟ: ಡಿ.13ಕ್ಕೆ ತೀರ್ಪು ಪ್ರಕಟ

2013, ಫೆಬ್ರವರಿಯಲ್ಲಿ ಹೈದರಾಬಾದ್ ನ ದಿಲ್ ಸುಖ್ ನಗರದಲ್ಲಿ ಸಂಭವಿಸಿದ ಅವಳಿ ಬಾಂಬ್ ಸ್ಫೋಟ ಪ್ರಕರಣದ ತೀರ್ಪುನ್ನು...

ಹೈದರಾಬಾದ್: 2013, ಫೆಬ್ರವರಿಯಲ್ಲಿ ಹೈದರಾಬಾದ್ ನ ದಿಲ್ ಸುಖ್ ನಗರದಲ್ಲಿ ಸಂಭವಿಸಿದ ಅವಳಿ ಬಾಂಬ್ ಸ್ಫೋಟ ಪ್ರಕರಣದ ತೀರ್ಪುನ್ನು ವಿಶೇಷ ಕೋರ್ಟ್ ಡಿಸೆಂಬರ್ 13ರಂದು ಪ್ರಕಟಿಸಲಿದೆ.
ಎನ್ ಐಎ ವಿಶೇಷ ಕೋರ್ಟ್ ದಿಲ್ ಸುಖ್ ನಗರದಲ್ಲಿನ ವೆಂಕಟಾದ್ರಿ ಚಿತ್ರಮಂದಿರದ ಸಮೀಪ ಸಂಭವಿಸಿದ ಅವಳಿ ಬಾಂಬ್ ಸ್ಪೋಟ ಪ್ರಕರಣದ ವಿಚಾರಣೆಯನ್ನು ನವೆಂಬರ್ 7ರಂದು ಮುಕ್ತಾಯಗೊಳಿಸಿದ್ದು, ನವೆಂಬರ್ 21ಕ್ಕೆ ತೀರ್ಪು ಕಾಯ್ದಿರಿಸಿತ್ತು. 
ಪ್ರಕರಣದ ಪ್ರಮುಖ ಆರೋಪಿ ಇಂಡಿಯನ್ ಮುಜಾಹಿದ್ದೀನ್ ಸ್ಥಾಪಕ ರಿಯಾಜ್ ಭಟ್ಕಳ್ ಇನ್ನು ತಲೆಮರೆಸಿಕೊಂಡಿದ್ದು, ಇತರೆ ಐವರು ಆರೋಪಿಗಳಾದ ಇಂಡಿಯನ್ ಮುಜಾಹಿದ್ದೀನ್ ಸಹ ಸಂಸ್ಥಾಪಕ ಯಾಸಿನ್ ಭಟ್ಕಳ್, ಪಾಕಿಸ್ತಾನದ ಪ್ರಜೆ ಝಿಯಾ ಉರ್ ರೆಹಮಾನ್, ಅಸಾದುಲ್ಲಾ ಅಖ್ತರ್ ಅಲಿಯಾಸ್ ಹಡ್ಡಿ ತಹಸೀನ್ ಅಖ್ತರ್ ಅಲಿಯಾಸ್ ಮೋನು ಹಾಗೂ ಐಜಾಝ್ ಶೇಕ್ ವಿರುದ್ಧ ಚಾರ್ಜ್ ಶೀಟ್ ದಾಖಲಿಸಲಾಗಿದೆ. 
ಸದ್ಯ ಚೆರ್ಲಪಲ್ಲಿ ಜೈಲಿನಲ್ಲಿರುವ ಐವರು ಆರೋಪಿಗಳನ್ನು ಇಂದು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಅಂತಿಮ ತೀರ್ಪನ್ನು ಡಿಸೆಂಬರ್ 13ಕ್ಕೆ ಕಾಯ್ದಿರಿಸಲಾಗಿತ್ತು.
2013, ಫೆಬ್ರವರಿ 21ರಂದು ಸಂಭವಿಸಿದ್ದ ಈ ಅವಳಿ ಸ್ಫೋಟದಲ್ಲಿ 18 ಮಂದಿ ಮೃತಪಟ್ಟಿದ್ದರು ಮತ್ತು 131ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT