ದೇಶ

ಎಸ್ಎಸ್ಎಂಕೆ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಸ್ಥಳಕ್ಕೆ ಸಿಎಂ ಮಮತಾ ಬ್ಯಾನರ್ಜಿ ಭೇಟಿ

Manjula VN

ಕೋಲ್ಕತಾ: ಕೋಲ್ಕತಾದ ಎಸ್ಎಸ್ಎಂಕೆ (ಸೇಥ್ ಸುಖ್ಲಾಲ್ ಕರ್ನಾನಿ ಮೆಮೋರಿಯಲ್ ) ಆಸ್ಪತ್ರೆಯಲ್ಲಿ ಸೋಮವಾರ ಅಗ್ನಿ ಅವಘಡ ಸಂಭವಿಸಿದೆ.

ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಆಸ್ಪತ್ರೆಯ 5ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸುದ್ದಿ ತಿಳಿಯುತ್ತಿದ್ದಂತೆ 10 ಅಗ್ನಿಶಾಮಕ ದಳ ವಾಹನಗಳೊಂದಿಗೆ ಸ್ಥಳಕ್ಕಾಗಮಿಸಿರುವ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ. ಘಟನೆಯಲ್ಲಿ ಸಾವು-ನೋವುಗಳು ಸಂಭವಿಸಿರುವುದಾಗಿ ಯಾವುದೇ ವರದಿಗಳಾಗಿಲ್ಲ.

ಇನ್ನು ಘಟನೆ ಕುರಿತಂತೆ ಮುಖ್ಯಂತ್ರಿ ಮಮತಾ ಬ್ಯಾನರ್ಜಿಯವರು ವರದಿ ಪಡೆದುಕೊಂಡಿದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಆಸ್ಪತ್ರೆಯ 5ನೇ ಮಹಡಿಯಲ್ಲಿ ದಟ್ಟ ಹೊಗೆ ಆವರಿಸಿದ್ದು, ಬೆಂಕಿ ಕೆನ್ನಾಲಿಗೆ ಇತರೆ ಮಹಡಿಗಳಿಗೆ ಹಬ್ಬುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

SCROLL FOR NEXT