ಫುಖರಾಯ ರೈಲ್ವೇ ನಿಲ್ದಾಣ ಸಮೀಪ ನಡೆದ ರೈಲು ದುರಂತ 
ದೇಶ

ಕಾನ್ಪುರ ರೈಲು ದುರಂತ: ಸಾವಿನ ಸಂಖ್ಯೆ 142ಕ್ಕೆ ಏರಿಕೆ, 169 ಗಾಯಾಳುಗಳ ಪಟ್ಟಿ ಬಿಡುಗಡೆ!

ಉತ್ತರ ಪ್ರದೇಶದ ಕಾನ್ಪುರ ಬಳಿ ಫುಖರಾಯ ರೈಲ್ವೇ ನಿಲ್ದಾಣದಲ್ಲಿ ಬಳಿ ಭಾನುವಾರ ಸಂಭವಿಸಿದ ಭೀಕರು ರೈಲು ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ ಬರೊಬ್ಬರಿ 142ಕ್ಕೆ ಏರಿಕೆಯಾಗಿದ್ದು, ಈ ಪೈಕಿ 110 ಶವಗಳ ಗುರುತು ಪತ್ತೆ ಮಾಡಲಾಗಿದೆ ಎಂದು ರೈಲ್ವೇ ಇಲಾಖೆ ಮೂಲಗಳು ತಿಳಿಸಿವೆ.

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರ ಬಳಿ ಫುಖರಾಯ ರೈಲ್ವೇ ನಿಲ್ದಾಣದಲ್ಲಿ ಬಳಿ ಭಾನುವಾರ ಸಂಭವಿಸಿದ ಭೀಕರು ರೈಲು ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ ಬರೊಬ್ಬರಿ 142ಕ್ಕೆ ಏರಿಕೆಯಾಗಿದ್ದು, ಈ ಪೈಕಿ 110 ಶವಗಳ  ಗುರುತು ಪತ್ತೆ ಮಾಡಲಾಗಿದೆ ಎಂದು ರೈಲ್ವೇ ಇಲಾಖೆ ಮೂಲಗಳು ತಿಳಿಸಿವೆ.

ದುರಂತ ನಡೆದ ಫುಖರಾಯ ರೈಲ್ವೇ ನಿಲ್ದಾಣದಲ್ಲಿ ಬಳಿ ಸೋಮವಾರವೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಅಪಘಾತಕ್ಕೀಡಾದ ಇಂದೋರ್-ಪಾಟ್ನಾ ಎಕ್ಸ್ ಪ್ರೆಸ್ ರೈಲು ಸಂಖ್ಯೆ 19321ರ ಹಳಿತಪ್ಪಿದ 14 ಬೋಗಿಗಳಲ್ಲಿ  ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈವರೆಗೂ 142 ಶವಗಳು ಪತ್ತೆಯಾಗಿದ್ದು, ಈ ಪೈಕಿ 110 ಶವಗಳ ಗುರುತು ಪತ್ತೆ ಮಾಡಲಾಗಿದೆ. ಅಂತೆಯೇ ಅಪಘಾತದಲ್ಲಿ ಗಾಯಾಳುಗಳಾಗಿರುವ 169 ಮಂದಿ ಪ್ರಯಾಣಿಕರ  ಪಟ್ಟಿಯನ್ನು ಕೂಡ ರೈಲ್ವೇ ಇಲಾಖೆ ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ಇನ್ನುಳಿದವರ ಗುರುತುಪತ್ತೆ ಇನ್ನಷ್ಟೇ ನಡೆಯಬೇಕಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಸೋಮವಾರ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಕಾನ್ಪುರ ಐಜಿ ಝಕಿ ಅಹ್ಮದ್ ಅವರು, 142 ಶವಗಳನ್ನು ಹೊರತೆಗೆಯಲಾಗಿದ್ದು, ಈ ಪೈಕಿ 110 ಮಂದಿಯ ಗುರುತು ಪತ್ತೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಅಂತೆಯೇ  ರೈಲ್ವೇ ಇಲಾಖೆ ಗಾಯಾಳುಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪಟ್ಟಿಯನ್ನು ತನ್ನ ವೆಬ್ ಸೈಟಿನಲ್ಲಿ ಮತ್ತು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT