ರಾಹುಲ್ ಗಾಂಧಿ(ಎಎನ್ಐ ಫೋಟೋ) 
ದೇಶ

ಪ್ರಧಾನಿಯವರ ಆಪ್ತರು ಸಂತೋಷದಿಂದ ಇದ್ದಾರೆ, ಬಡವರು ಮಾತ್ರ ಸಾಲಿನಲ್ಲಿ ನಿಲ್ಲಬೇಕಾಗಿದೆ: ರಾಹುಲ್ ಗಾಂಧಿ

ಅಧಿಕ ಮೌಲ್ಯದ ನೋಟುಗಳ ನಿಷೇಧದಿಂದ ಈ ದೇಶದ ಬಡ ಜನರು ಎಟಿಎಂಗಳ ಮುಂದೆ ಸಾಲಿನಲ್ಲಿ...

ನವದೆಹಲಿ: ಅಧಿಕ ಮೌಲ್ಯದ ನೋಟುಗಳ ನಿಷೇಧದಿಂದ ಈ ದೇಶದ ಬಡ ಜನರು ಎಟಿಎಂಗಳ ಮುಂದೆ ಸಾಲಿನಲ್ಲಿ ನಿಂತು ಸಮಯ ವ್ಯರ್ಥ ಮಾಡಬೇಕಾಗಿ ಬಂದಿದೆ. ಪ್ರಧಾನಿ ನರೇಂದ್ರ ಮೋದಿಯವರ ಆಪ್ತರು ಮತ್ತು ಧನಿಕರು ಯಾವುದೇ ತೊಂದರೆಯಿಲ್ಲದೆ ಹಣ ಪಡೆಯುತ್ತಿದ್ದಾರೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಅವರು ಇಂದು ಬೆಳಗ್ಗೆ ದೆಹಲಿಯ ಅನೇಕ ಕಡೆ ಎಟಿಎಂಗಳ ಮುಂದೆ ಸಾಲಿನಲ್ಲಿ ನಿಂತಿರುವ ಜನರನ್ನು ಹೋಗಿ ಮಾತನಾಡಿಸಿದರು. ಅವರ ಸಮಸ್ಯೆಗಳನ್ನು ಆಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರದ ದಿಢೀರ್ ನಿರ್ಧಾರದ ಬಳಿಕ ತಾವು ಬಹಳ ತೊಂದರೆಗೆ ಸಿಲುಕಿ ಹಾಕಿಕೊಂಡಿದ್ದೇವೆ ಎಂದು ಜನರು ಹೇಳುತ್ತಿದ್ದಾರೆ. ಬ್ಯಾಂಕು ಮತ್ತು ಎಟಿಎಂ ಹಿಂದುಗಡೆ ಶ್ರೀಮಂತ ಆಯ್ದ ವ್ಯಕ್ತಿಗಳಿಗೆ ಹೊಸ ನೋಟುಗಳನ್ನು ನೀಡುತ್ತಿದ್ದು, ಬಡವರಾದ ನಾವು ಗಂಟೆಗಟ್ಟಲೆ ಹೊರಗೆ ಸಾಲಿನಲ್ಲಿ ನಿಂತುಕೊಳ್ಳಬೇಕಾಗಿದೆ ಎಂದು ಜನರು ಹೇಳುತ್ತಿದ್ದಾರೆ ಎಂದರು. ಜನರ ಸಮಸ್ಯೆಗಳನ್ನು ಕಣ್ಣಾರೆ ನೋಡಲು ಇಲ್ಲಿಗೆ ಬಂದಿರುವುದಾಗಿ ರಾಹುಲ್ ಗಾಂಧಿ ತಿಳಿಸಿದರು.
ಕೆಲವು ಆಯ್ದ ಜನರ ಅಭಿಪ್ರಾಯವನ್ನು ಕೇಳಿ ದೇಶದ ಅತಿದೊಡ್ಡ ಆರ್ಥಿಕ ನಿರ್ಧಾರವನ್ನು ಪ್ರಧಾನಿಯವರು ತೆಗೆದುಕೊಂಡಿದ್ದಾರೆ. ಆ ಸಮಯದಲ್ಲಿ ಅವರು ದೇಶದ ಸಾಮಾನ್ಯ ಜನತೆಯ ಪರಿಸ್ಥಿತಿ ಬಗ್ಗೆ ಆಲೋಚಿಸಿರಲಿಲ್ಲ ಎಂದು ರಾಹುಲ್ ಗಾಂಧಿ ದೂರಿದರು.
ನಿನ್ನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಇಂದೊರ್-ಪಾಟ್ನಾ ಎಕ್ಸ್ ಪ್ರೆಸ್ ರೈಲು ದುರಂತದ ಬಗ್ಗೆ ಮಾತನಾಡಿದ ಅವರು, ಭಾರತದ ರೈಲ್ವೆ ಮೂಲಸೌಕರ್ಯಗಳನ್ನು ಮೇಲ್ದರ್ಜೆಗೇರಿಸಬೇಕಾದ ಅಗತ್ಯವಿದೆ. ಪ್ರಧಾನಿಯವರು ಹಳೆಯ ಯೋಜನೆಗಳನ್ನು ಘೋಷಿಸುವ ಮುನ್ನ, ಬುಲ್ಲೆಟ್ ರೈಲನ್ನು ಪರಿಚಯಿಸುವ ಮೊದಲು ದೇಶದ ಸಾಮಾನ್ಯ ಜನತೆಯ ಸುರಕ್ಷತೆ ಬಗ್ಗೆ ಮೊದಲು ಗಮನಹರಿಸಬೇಕಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT