ನ್ಯಾ.ಆರ್ ಎಂ ಲೋಧಾ 
ದೇಶ

ಬಿಸಿಸಿಐ ಅಧಿಕಾರಿಗಳನ್ನು ಕಿತ್ತಾಕಿ, ವೀಕ್ಷಕರನ್ನಾಗಿ ಜಿಕೆ ಪಿಳ್ಳೈ ನೇಮಿಸಿ: ಸುಪ್ರೀಂಗೆ ಲೋಧಾ ಸಮಿತಿ

ಬಿಸಿಸಿಐ ಆಡಳಿತ ಮಂಡಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗೆ ಹೊಸ ಶಿಫಾರಸ್ಸುಗಳನ್ನು ಸಲ್ಲಿಸಿರುವ ಲೋಧಾ ಸಮಿತಿ ಬಿಸಿಸಿಐ ನ ಕೆಲವು ನಿರ್ದಿಷ್ಟ ಅಧಿಕಾರಿಗಳನ್ನು ಕೈಬಿಡುವಂತೆ ಸೂಚಿಸಬೇಕೆಂದು ಹೇಳಿದೆ.

ನವದೆಹಲಿ: ಬಿಸಿಸಿಐ ಆಡಳಿತ ಮಂಡಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗೆ ಹೊಸ ಶಿಫಾರಸ್ಸುಗಳನ್ನು ಸಲ್ಲಿಸಿರುವ ನ್ಯಾ.ಆರ್ ಎಂ ಲೋಧಾ ಸಮಿತಿ ಬಿಸಿಸಿಐ ನ ಕೆಲವು ನಿರ್ದಿಷ್ಟ ಪದಾಧಿಕಾರಿಗಳನ್ನು ಕೈಬಿಡುವಂತೆ ಸೂಚಿಸಬೇಕೆಂದು ಹೇಳಿದೆ. 
ಸುಪ್ರೀಂ ಕೋರ್ಟ್ ಜುಲೈ ನಲ್ಲಿ ನಿಗದಿಪಡಿಸಿದ್ದ ಮಾನದಂಡಗಳನ್ನು ಅನುಸರಿಸದ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ನ ಆಡಳಿತವನ್ನು ಬದಲಾವಣೆ ಮಾಡಬೇಕೆಂದು ಶಿಫಾರಸಿನಲ್ಲಿ ಹೇಳಿರುವ ಲೋಧಾ ಸಮಿತಿ ಬಿಸಿಸಿಐನ ರಾಜ್ಯ ಪದಾಧಿಕಾರಿಗಳನ್ನೂ ಸಹ ವಜಾಗೊಳಿಸಬೇಕೆಂದು ಲೋಧಾ ಸಮಿತಿ ಸಲ್ಲಿಸಿರುವ ಹೊಸ ಶಿಫಾರಸ್ಸುಗಳು ಹೇಳಿವೆ.  ಕ್ರಿಕೆಟ್ ಮಂಡಳಿಯ ಆಡಳಿತದ ಮೇಲ್ವಿಚಾರಣೆಗಾಗಿ ಮಾಜಿ ಕೇಂದ್ರ ಗೃಹ ಕಾರ್ಯದರ್ಶಿ ಜಿಕೆ ಪಿಳ್ಳೈ ಅವರನ್ನು ವೀಕ್ಷಕರನ್ನಾಗಿ ನೇಮಿಸಬೇಕೆಂದು ಸಲಹೆ ನೀಡಿರುವ ಲೋಧಾ ಸಮಿತಿ ಆಡಳಿತ ವರ್ಗದ ಸಿಬ್ಬಂದಿಗಳನ್ನು ನೇಮಕಮಾಡಿ ಅವರ ಸಂಭಾವನೆಯನ್ನು ನಿಗದಿಪಡಿಸಲು ಅನುಮತಿಯನ್ನು ಕೇಳಿದೆ. 
ಲೋಧಾ ಸಮಿತಿ ಸೂಚಿಸಿರುವ ಶಿಫಾರಸ್ಸುಗಳನ್ನು ಜಾರಿಗೊಳಿಸಲು ಬಿಸಿಸಿಐ ಪ್ರತಿರೋಧ ತೋರಿದ್ದ ಹಿನ್ನೆಲೆಯಲ್ಲಿ ಬಿಸಿಸಿಐ ಹಾಗೂ ಸುಪ್ರೀಂ ಕೋರ್ಟ್ ನಡುವೆ ಬಿಕ್ಕಟ್ಟು ಉಂಟಾಗಿದೆ. ಈ ಬೆನ್ನಲ್ಲೇ ಲೋಧಾ ಸಮಿತಿ ಮತ್ತೊಂದಷ್ಟು ಹೊಸ ಶಿಫಾರಸ್ಸುಗಳನ್ನು ಸೂಚಿಸಿದೆ.  ಲೋಧಾ ಸಮಿತಿ ಶಿಫಾರಸ್ಸುಗಳನ್ನು ಜಾರಿಗೊಳಿಸಲು ಹಿಂದೆಟುಹಾಕಿದ್ದ ಬಿಸಿಸಿಐ ನಡೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್ ಬಿಸಿಸಿಐ ನಡೆಯಿಂದ ಮಂಡಳಿಯಲ್ಲಿ ಪಾರದರ್ಶಕತೆ ತರುವುದು ಕಷ್ಟ ಸಾಧ್ಯ ಎಂದು ಹೇಳಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?