ನ್ಯಾ.ಆರ್ ಎಂ ಲೋಧಾ 
ದೇಶ

ಬಿಸಿಸಿಐ ಅಧಿಕಾರಿಗಳನ್ನು ಕಿತ್ತಾಕಿ, ವೀಕ್ಷಕರನ್ನಾಗಿ ಜಿಕೆ ಪಿಳ್ಳೈ ನೇಮಿಸಿ: ಸುಪ್ರೀಂಗೆ ಲೋಧಾ ಸಮಿತಿ

ಬಿಸಿಸಿಐ ಆಡಳಿತ ಮಂಡಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗೆ ಹೊಸ ಶಿಫಾರಸ್ಸುಗಳನ್ನು ಸಲ್ಲಿಸಿರುವ ಲೋಧಾ ಸಮಿತಿ ಬಿಸಿಸಿಐ ನ ಕೆಲವು ನಿರ್ದಿಷ್ಟ ಅಧಿಕಾರಿಗಳನ್ನು ಕೈಬಿಡುವಂತೆ ಸೂಚಿಸಬೇಕೆಂದು ಹೇಳಿದೆ.

ನವದೆಹಲಿ: ಬಿಸಿಸಿಐ ಆಡಳಿತ ಮಂಡಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗೆ ಹೊಸ ಶಿಫಾರಸ್ಸುಗಳನ್ನು ಸಲ್ಲಿಸಿರುವ ನ್ಯಾ.ಆರ್ ಎಂ ಲೋಧಾ ಸಮಿತಿ ಬಿಸಿಸಿಐ ನ ಕೆಲವು ನಿರ್ದಿಷ್ಟ ಪದಾಧಿಕಾರಿಗಳನ್ನು ಕೈಬಿಡುವಂತೆ ಸೂಚಿಸಬೇಕೆಂದು ಹೇಳಿದೆ. 
ಸುಪ್ರೀಂ ಕೋರ್ಟ್ ಜುಲೈ ನಲ್ಲಿ ನಿಗದಿಪಡಿಸಿದ್ದ ಮಾನದಂಡಗಳನ್ನು ಅನುಸರಿಸದ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ನ ಆಡಳಿತವನ್ನು ಬದಲಾವಣೆ ಮಾಡಬೇಕೆಂದು ಶಿಫಾರಸಿನಲ್ಲಿ ಹೇಳಿರುವ ಲೋಧಾ ಸಮಿತಿ ಬಿಸಿಸಿಐನ ರಾಜ್ಯ ಪದಾಧಿಕಾರಿಗಳನ್ನೂ ಸಹ ವಜಾಗೊಳಿಸಬೇಕೆಂದು ಲೋಧಾ ಸಮಿತಿ ಸಲ್ಲಿಸಿರುವ ಹೊಸ ಶಿಫಾರಸ್ಸುಗಳು ಹೇಳಿವೆ.  ಕ್ರಿಕೆಟ್ ಮಂಡಳಿಯ ಆಡಳಿತದ ಮೇಲ್ವಿಚಾರಣೆಗಾಗಿ ಮಾಜಿ ಕೇಂದ್ರ ಗೃಹ ಕಾರ್ಯದರ್ಶಿ ಜಿಕೆ ಪಿಳ್ಳೈ ಅವರನ್ನು ವೀಕ್ಷಕರನ್ನಾಗಿ ನೇಮಿಸಬೇಕೆಂದು ಸಲಹೆ ನೀಡಿರುವ ಲೋಧಾ ಸಮಿತಿ ಆಡಳಿತ ವರ್ಗದ ಸಿಬ್ಬಂದಿಗಳನ್ನು ನೇಮಕಮಾಡಿ ಅವರ ಸಂಭಾವನೆಯನ್ನು ನಿಗದಿಪಡಿಸಲು ಅನುಮತಿಯನ್ನು ಕೇಳಿದೆ. 
ಲೋಧಾ ಸಮಿತಿ ಸೂಚಿಸಿರುವ ಶಿಫಾರಸ್ಸುಗಳನ್ನು ಜಾರಿಗೊಳಿಸಲು ಬಿಸಿಸಿಐ ಪ್ರತಿರೋಧ ತೋರಿದ್ದ ಹಿನ್ನೆಲೆಯಲ್ಲಿ ಬಿಸಿಸಿಐ ಹಾಗೂ ಸುಪ್ರೀಂ ಕೋರ್ಟ್ ನಡುವೆ ಬಿಕ್ಕಟ್ಟು ಉಂಟಾಗಿದೆ. ಈ ಬೆನ್ನಲ್ಲೇ ಲೋಧಾ ಸಮಿತಿ ಮತ್ತೊಂದಷ್ಟು ಹೊಸ ಶಿಫಾರಸ್ಸುಗಳನ್ನು ಸೂಚಿಸಿದೆ.  ಲೋಧಾ ಸಮಿತಿ ಶಿಫಾರಸ್ಸುಗಳನ್ನು ಜಾರಿಗೊಳಿಸಲು ಹಿಂದೆಟುಹಾಕಿದ್ದ ಬಿಸಿಸಿಐ ನಡೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್ ಬಿಸಿಸಿಐ ನಡೆಯಿಂದ ಮಂಡಳಿಯಲ್ಲಿ ಪಾರದರ್ಶಕತೆ ತರುವುದು ಕಷ್ಟ ಸಾಧ್ಯ ಎಂದು ಹೇಳಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT