ಉಪಚುನಾವಣೆ ಫಲಿತಾಂಶ ನೋಟು ನಿಷೇಧಕ್ಕೆ ಜನರ ಆಕ್ರೋಶದ ಪ್ರತೀಕ: ಮಮತಾ ಬ್ಯಾನರ್ಜಿ 
ದೇಶ

ಉಪಚುನಾವಣೆ ಫಲಿತಾಂಶ ನೋಟು ನಿಷೇಧಕ್ಕೆ ಜನರ ಆಕ್ರೋಶದ ಪ್ರತೀಕ: ಮಮತಾ ಬ್ಯಾನರ್ಜಿ

ಉಪಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಗೆಲುವು ಸಾಧಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಮಮತಾ ಬ್ಯಾನರ್ಜಿ, ಪಕ್ಷದ ಗೆಲುವು ನೋಟು ನಿಷೇಧದ ವಿರುದ್ಧ ಜನತೆ ಸಿಡಿದೆದ್ದಿರುವುದನ್ನು ಸೂಚಿಸುತ್ತದೆ...

ಕೋಲ್ಕತಾ: ಪಶ್ಚಿಮ ಬಂಗಾಳದ ಉಪಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಗೆಲುವು ಸಾಧಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಮಮತಾ ಬ್ಯಾನರ್ಜಿ, ಪಕ್ಷದ ಗೆಲುವು ನೋಟು ನಿಷೇಧದ ವಿರುದ್ಧ ಜನತೆ ಸಿಡಿದೆದ್ದಿರುವುದನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ. 
ನೋಟು ನಿಷೇಧದ ವಿರುದ್ಧ ಜನತೆ ಸಿಡಿದೆದ್ದಿದ್ದಾರೆ. ಚುನಾವಣೆಯ ಫಲಿತಾಂಶ ಅದರ ಸೂಚನೆ, ಪ್ರಜಾಪ್ರಭುತ್ವದಲ್ಲಿ ಜನರು ತಮ್ಮ ಆಕ್ರೋಶವನ್ನು ತೋರಲು ಮತದಾನವನ್ನು ಬಳಸಿಕೊಂಡಿದ್ದಾರೆ, ಈ ಆರ್ಥಿಕ ತುರ್ತುಪರಿಸ್ಥಿತಿ ವಿರುದ್ಧ  ಎಲ್ಲಾ ರಾಜಕೀಯ ಪಕ್ಷಗಳೂ ಹೋರಾಡಬೇಕು ಎಂದು ಮಮತಾ ಬ್ಯಾನರ್ಜಿ ಕರೆ ನೀಡಿದ್ದಾರೆ. 
ಜನಗಳ ಗೆಲುವು ಅತಿ ದೊಡ್ಡ ಗೆಲುವಾಗಿದ್ದು ಇದಕ್ಕಾಗಿ ಪಶ್ಚಿಮ ಬಂಗಾಳದ ಜನತೆಯನ್ನು ಅಭಿನಂದಿಸುತ್ತೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕೂಚ್‍ಬೆಹರ್ ಮತ್ತು ಟಮ್ಲುಕ್ ಮೋಂಟೇಶ್ವರ್ ಲೋಕಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಎಲ್ಲ ಮೂರು ಕ್ಷೇತ್ರಗಳಲ್ಲೂ ಜಯಭೇರಿ ಬಾರಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT