ವಿ.ನಾರಾಯಣಸ್ವಾಮಿ 
ದೇಶ

ಪುದುಚೆರಿ ಉಪಚುನಾವಣೆ: ಸಿಎಂ ವಿ ನಾರಾಯಣಸ್ವಾಮಿ ಗೆ 11,151 ಮತಗಳ ಗೆಲುವು

ನೆಲ್ಲಿತೋಪೆ ವಿಧಾನಸಭೆ ಉಪ ಚುನಾವಣೆಯಲ್ಲಿ ಪುದುಚೆರಿ ಮುಖ್ಯಮಂತ್ರಿ ವಿ. ನಾರಾಯಣ ಸ್ವಾಮಿ 11,151 ಮತಗಳಿಂದ ಜಯಗಳಿಸಿದ್ದಾರೆ...

ಪುದುಚೆರಿ: ನೆಲ್ಲಿತೋಪೆ ವಿಧಾನಸಭೆ ಉಪ ಚುನಾವಣೆಯಲ್ಲಿ ಪುದುಚೆರಿ ಮುಖ್ಯಮಂತ್ರಿ ವಿ. ನಾರಾಯಣ ಸ್ವಾಮಿ 11,151 ಮತಗಳಿಂದ ಜಯಗಳಿಸಿದ್ದಾರೆ.

ತಮ್ಮ ಪ್ರತಿಸ್ಪರ್ಧಿ ಎಐಎಡಿಎಂಕೆಯ ಓಂ ಶಕ್ತಿ ಶೇಖರ್ ಅವರನ್ನು ಸೋಲಿಸುವುದರ ಮೂಲಕ ಕೇಂದ್ರಾಡಳಿತ ಪ್ರದೇಶವಾದ ಪುದುಚೆರಿ ಮುಖ್ಯಮಂತ್ರಿಯಾಗಿ ಮುಂದುವರಿಯಯಲಿದ್ದಾರೆ.

ಚುನಾಯಿತ ಪ್ರತಿನಿಧಿಯಲ್ಲದ ನಾರಾಯಣಸ್ವಾಮಿ ಜೂನ್ 6 ರಂದು ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದರು. ಅಧಿಕಾರ ಸ್ವೀಕರಿಸಿದ ಆರು ತಿಂಗಳೊಳಗೆ ಪುದುಚೆರಿಯ ಯಾವುದೇ ವಿಧಾನಸಭೆ ಕ್ಷೇತ್ರದಿಂದ ಚುನಾವಣೆಯಲ್ಲಿ ಆರಿಸಿ ಬರಬೇಕಾಗಿತ್ತು.

ಒಟ್ಟು ಚಲಾವಣೆಯಾದ 26564 ಮತಗಳಲ್ಲಿ ನಾರಾಯಣಸ್ವಾಮಿ 18,709 ಮತ ಪಡೆದಿದ್ದಾರೆ. ತಮ್ಮ ಪ್ರತಿಸ್ಫರ್ಧಿ  ಓಂ ಶಕ್ತಿ ಶೇಖರ್ 7565 ಮತಗಳನ್ನು ಪಡೆದಿದ್ದಾರೆ. ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ನಾರಾಯಣಸ್ವಾಮಿ ಭಾರಿ ಮತಗಳ ಅಂತರದಿಂದ ಜಯಗಳಿಸಿದ್ದರು, ಆದರೆ ಈ ಬಾರಿ ಚುನಾವಣೆಯಲ್ಲಿ ಮತಗಳ ಅಂತರ ಕುಸಿದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT