ಸಾಂದರ್ಭಿಕ ಚಿತ್ರ 
ದೇಶ

ನೋಟು ನಿಷೇಧ: ನಾಗಲ್ಯಾಂಡ್ ವಿಮಾನ ನಿಲ್ದಾಣದಲ್ಲಿ ಮೂರುವರೆ ಕೋಟಿ ಹಣ ಜಪ್ತಿ

ಬಿಹಾರ ಮೂಲದ ಉದ್ಯಮಿಯೊಬ್ಬ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಸುಮಾರು ಮೂರುವರೆ ಕೋಟಿ ರು ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ....

ನವದೆಹಲಿ: ಬಿಹಾರ ಮೂಲದ ಉದ್ಯಮಿಯೊಬ್ಬ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಸುಮಾರು ಮೂರುವರೆ ಕೋಟಿ ರು ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಹಿಸ್ಸಾರ್ ನಿಂದ ಬಂದ ವಿಮಾನ ಬೆಳಗ್ಗೆ 10. 07 ನಿಮಿಶಕ್ಕೆ ನಾಗಾಲ್ಯಾಂಡ್ ನ ದಿಮಾಪುರ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ. ವಿಮಾನದಲ್ಲಿದ್ದ ಬಿಹಾರದ ಸಿಂಗ್ ಎಂಬ ವ್ಯಕ್ತಿ ಬಳಿಯಿಂದ ನಿಷೇದಿಸಲ್ಪಟ್ಟ 500 ಹಾಗೂ 1.000 ರು ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ನಂತರ ಆತನನ್ನು ದೆಹಲಿಗೆ ಕರೆತರುವ ವೇಳೆಗೆ ಅಂದರೆ 12.15 ನಿಮಿಷದೊಳಗೆ ಜಪ್ತಿ ಮಾಡಿದ ಹಣ ಕಣ್ಮರೆಯಾಗಿದೆ ಎಂದು ಹೇಳಲಾಗಿದೆ.

ಮೊದಲಿಗೆ ಉದ್ಯಮಿಯಿಂದ 5.5 ಕೋಟಿ ರು ಹಣ ವಶಪಡಿಸಿಕೊಳ್ಳಲಾಯಿತು ಎಂದು ಹೇಳಲಾಯಿತು. ನಂತರ 3.5 ಕೋಟಿ ರು ವಶ ಪಡಿಸಿಕೊಳ್ಳಲಾಯಿತು ಎಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಹಣದ ಮೂಲದ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈ ಹಣ ದೆಹಲಿಯ ರಾಜಕಾರಣಿಯೊಬ್ಬರಿಗೆ ಸೇರಿದ್ದು, ಅದನ್ನು ಉದ್ಯಮಿ ಮೂಲಕ ಸಾಗಿಸಲಾಗುತ್ತಿತ್ತು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT