ಕಾಂಗ್ರೆಸ್ ನಾಯಕ ಪಿ.ಸಿ. ಚಾಕೊ 
ದೇಶ

ಸರ್ತಾಜ್ ಅಜೀಜ್ ಭೇಟಿ ಫಲದಾಯಕವಾಗಿರಬೇಕಿದ್ದರೆ ಪಾಕ್ ಸರಿಯಾದ ರೀತಿಯಲ್ಲಿ ವರ್ತಿಸಬೇಕು: ಕಾಂಗ್ರೆಸ್

ಪಾಕಿಸ್ತಾನ ಪ್ರಧಾನಮಂತ್ರಿಗಳ ಸಲಹೆಗಾರ ಸರ್ತಾಜ್ ಅಜೀಜ್ ಅವರು ಭಾರತಕ್ಕೆ ಭೇಟಿ ನೀಡುತ್ತಿದ್ದು, ಭೇಟಿ ಫಲಪ್ರದಾಯಕವಾಗಿರಬೇಕಿದ್ದರೆ ಪಾಕಿಸ್ತಾನ ಸರಿಯಾದ ರೀತಿಯಲ್ಲಿ ವರ್ತಿಸಬೇಕಿದೆ ಎಂದು ಕಾಂಗ್ರೆಸ್ ಗುರುವಾರ ಹೇಳಿದೆ...

ನವದೆಹಲಿ: ಪಾಕಿಸ್ತಾನ ಪ್ರಧಾನಮಂತ್ರಿಗಳ ಸಲಹೆಗಾರ ಸರ್ತಾಜ್ ಅಜೀಜ್ ಅವರು ಭಾರತಕ್ಕೆ ಭೇಟಿ ನೀಡುತ್ತಿದ್ದು, ಭೇಟಿ ಫಲಪ್ರದಾಯಕವಾಗಿರಬೇಕಿದ್ದರೆ ಪಾಕಿಸ್ತಾನ ಸರಿಯಾದ ರೀತಿಯಲ್ಲಿ ವರ್ತಿಸಬೇಕಿದೆ ಎಂದು ಕಾಂಗ್ರೆಸ್ ಗುರುವಾರ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ನಾಯಕ ಪಿ.ಸಿ. ಚಾಕೊ ಅವರು, ಉಭಯ ರಾಷ್ಟ್ರಗಳ ನಡುವೆ ರಾಜತಾಂತ್ರಿಕ ನಡೆಗಳು ನಡೆಯುತ್ತಿದ್ದು, ಪಾಕಿಸ್ತಾನ ರಾಷ್ಟ್ರ ಬೇಜವಾಬ್ದಾರಿಯುತವಾಗಿ ವರ್ತಿಸುತ್ತಿದೆ. ಸರ್ತಾಜ್ ಅಜೀಜ್ ಅವರ ಭೇಟಿ ಫಲದಾಯಕವಾಗಿರಬೇಕಿದ್ದರೆ, ಮೊದಲು ಪಾಕಿಸ್ತಾನ ಸರಿಯಾದ ರೀತಿಯಲ್ಲಿ ವರ್ತಿಸಬೇಕಿದೆ. ಇಲ್ಲದೇ ಹೋದರೆ, ಭೇಟಿ ಕೇವಲ ಭೇಟಿಯಾಗಿಯೇ ಇರುತ್ತದೆಯೇ ಹೊರತು ಯಾವುದೇ ಫಲವನ್ನು ಕೊಡುವುದಿಲ್ಲ ಎಂದು ಹೇಳಿದ್ದಾರೆ.

ಸರ್ತಾಜ್ ಅಜೀಜ್ ಅವರು ಡಿಸೆಂಬರ್ 3 ಮತ್ತು 4 ರಂದು ಅಮೃತಸರದಲ್ಲಿ ನಡೆಯಲಿರುವ ಹಾರ್ಟ್ ಆಫ್ ಎಷ್ಯಾ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಹೆಚ್ಒಎ ಸಮ್ಮೇಳನದಲ್ಲಿ ಅಜೀಜ್ ಅವರು ಪಾಲ್ಗೊಳ್ಳುವ ಬಗ್ಗೆ ಪಾಕಿಸ್ತಾನ ಈಗಾಗಲೇ ಖಚಿತಪಡಿಸಿದೆ. ಸಮ್ಮೇಳನದಲ್ಲಿ ಪ್ರಧಾನಿ ಮೋದಿ, ಆಫ್ಘಾನಿಸ್ತಾನ ಅಧ್ಯಕ್ಷ ಅಶ್ರಫ್ ಘನಿ ಸೇರಿದಂತೆ 40 ಕ್ಕೂ ಅಧಿಕ ರಾಷ್ಟ್ರಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್