ಮಾಜಿ ಪ್ರಧಾನ ಮಂತ್ರಿ ಡಾ.ಮನಮೋಹನ್ ಸಿಂಗ್(ಸಂಗ್ರಹ ಚಿತ್ರ) 
ದೇಶ

ಮನಮೋಹನ್ ಸಿಂಗ್ ಅವರು ತಮ್ಮ ನಾಯಕರಿಗೆ ನಿಷ್ಠೆ ತೋರಿಸುತ್ತಿದ್ದಾರೆ, ದೇಶದ ಜನರಿಗಾಗಿ ಅಲ್ಲ: ಬಿಜೆಪಿ

ಕಾಂಗ್ರೆಸ್ ಪಕ್ಷ ಮತ್ತು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿನ್ನೆ ರಾಜ್ಯಸಭೆಯಲ್ಲಿ ನೀಡಿರುವ...

ನವದೆಹಲಿ: ಕಾಂಗ್ರೆಸ್ ಪಕ್ಷ ಮತ್ತು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿನ್ನೆ ರಾಜ್ಯಸಭೆಯಲ್ಲಿ ನೀಡಿರುವ ಹೇಳಿಕೆಗೆ ಟೀಕಿಸಿರುವ ಬಿಜೆಪಿ, ಮಾಜಿ ಪ್ರಧಾನಿಯವರು ತಮ್ಮ ನಾಯಕರಿಗೆ ಬೇಕಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆಯೇ ಹೊರತು ಭಾರತ ದೇಶದ ಜನರಿಗಾಗಿ ಅಲ್ಲ ಎಂದು ಹೇಳಿದೆ.
ಇಂದು ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಬಿಜೆಪಿ ನಾಯಕ ಜಿ ವಿಎಲ್ ನರಸಿಂಹ ರಾವ್, ವಾಸ್ತವವಾಗಿ 2004ರಲ್ಲಿ ಮನಮೋಹನ್ ಸಿಂಗ್ ಅವರು ಕಾಂಗ್ರೆಸ್ ನಿಂದ ವೈಯಕ್ತಿಕವಾಗಿ ನಿಷೇಧಕ್ಕೊಳಗಾಗಿದ್ದರು. ಅವರಿಗೆ ಕಟ್ಟುನಿಟ್ಟು ಹೇರುವ ಮೂಲಕ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊಂಡಿದ್ದರು.ತಮಗೆ ಏನನ್ನಿಸಿತೋ ಅದನ್ನು ಮಾತನಾಡುವ ಅಧಿಕಾರ ಮನಮೋಹನ್ ಸಿಂಗ್ ಅವರಿಗಿರಲಿಲ್ಲ. ಅವರು ಪ್ರಧಾನಿಯಾಗಿ ಯಾವುದೇ ನಿರ್ಧಾರ ತೆಗೆದುಕೊಂಡಿರಲಿಲ್ಲ. ಪಕ್ಷದ ನಾಯಕತ್ವವನ್ನು ಕೂಡ ಅವರು ಪ್ರಶ್ನಿಸಲಿಲ್ಲ. ಅವರು ಸೋನಿಯಾ ಗಾಂಧಿಯವರಿಂದ ನೇಮಕಗೊಂಡ ನಾಮಾಂಕಿತ ಪ್ರಧಾನಿಯಾಗಿದ್ದರಷ್ಟೆ. ಹಾಗಾಗಿ ಇಂದಿನ ಸರ್ಕಾರದ ಬಗ್ಗೆ ಅವರು ಏನೇ ಹೇಳುವುದಿದ್ದರೂ ಅವರು ರಾಹುಲ್ ಗಾಂಧಿಯವರು ಹೇಳಬೇಕಾಗಿದ್ದುದನ್ನು ಹೇಳುತ್ತಿದ್ದಾರಷ್ಟೆ. ನಿಜವಾಗಿಯೂ ಅವರ ಮನಸ್ಸಿನಿಂದ ಹೊರಬರುವ ಮಾತುಗಳು ಅವಲ್ಲ. ತಮ್ಮ ನಾಯಕರಿಗಾಗಿ ಕರ್ತವ್ಯ ಮಾಡುತ್ತಿದ್ದಾರೆ ಎಂದು ರಾವ್ ಕಟುವಾಗಿ ಟೀಕಿಸಿದರು.
ಹಿಂದಿನ ಯುಪಿಎ ಸರ್ಕಾರವನ್ನು ಟೀಕಿಸಿದ ಅವರು, ನೋಟುಗಳ ರದ್ದತಿ ಕುರಿತು ಹಿಂದಿನ ಯುಪಿಎ ಸರ್ಕಾರ ಕೂಡ ಪರಿಗಣಿಸಿತ್ತು. ಆದರೆ ಅದನ್ನು ಜಾರಿಗೆ ತರುವ ರಾಜಕೀಯ ಇಚ್ಛಾಶಕ್ತಿ, ರಾಜಕೀಯ ಅಧಿಕಾರ ಅವರಲ್ಲಿರಲಿಲ್ಲ. ತಾವೇ ನಿರ್ಧಾರ ತೆಗೆದುಕೊಳ್ಳುವ ನಾಯಕತ್ವ ಅಧಿಕಾರ ಮನಮೋಹನ್ ಸಿಂಗ್ ಅವರಿಗಿರಲಿಲ್ಲ. ಹಣದ ವಹಿವಾಟು ಕುರಿತು ಹೇಳುವುದಾದರೆ, ಅವರ ಸರ್ಕಾರವೇ ಒಂದು ಸಲ ನಗದು ವಿನಿಮಯ ತೆರಿಗೆ ತಂದಿತ್ತು. ಹಾಗಾಗಿ ಪ್ರಸ್ತುತ ಸರ್ಕಾರವನ್ನು ಪ್ರಶ್ನಿಸುವುದು ಮನಮೋಹನ್ ಸಿಂಗ್ ಅವರಿಗೆ ಅಪಾಯದ ರಾಜಕೀಯ ಅವಕಾಶವಾದಿತನ. ಮನಮೋಹನ್ ಸಿಂಗ್ ಅವರು ಆರ್ಥಿಕ ತಜ್ಞರಂತೆ, ಉತ್ತಮ ಆಡಳಿತಗಾರನಂತೆ ಮಾತನಾಡುವುದನ್ನು ನಾವು ನಿರೀಕ್ಷಿಸುತ್ತೇವೆಯೇ ಹೊರತು ರಾಹುಲ್ ಗಾಂಧಿಯಂತೆ ಅಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT