ಸಿಎಂ ಕುರ್ಚಿಯಲ್ಲಿ ಕುಳಿತಿರುವ ಸ್ವಾಮೀಜಿ 
ದೇಶ

ತೆಲಂಗಾಣ ಸಿಎಂ ಕುರ್ಚಿಯಲ್ಲಿ ಕುಳಿತ ಸ್ವಾಮೀಜಿ: ಎಲ್ಲೆಡೆ ಬಿಸಿಬಿಸಿ ಚರ್ಚೆ

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಸಿಎಂ ಕುರ್ಚಿಯಲ್ಲಿ ಸ್ವಾಮೀಜಿ ತ್ರಿದಂಡಿ ಶ್ರೀರಾಮಾನಾರಾಯಣ ರಾಮಾನುಜ ಚಿನ್ನ ಜಿಯಾರ್ ...

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಸಿಎಂ ಕುರ್ಚಿಯಲ್ಲಿ ಸ್ವಾಮೀಜಿ ತ್ರಿದಂಡಿ ಶ್ರೀರಾಮಾನಾರಾಯಣ ರಾಮಾನುಜ ಚಿನ್ನ ಜಿಯಾರ್ ಸ್ವಾಮಿ ಕುಳಿತ ವಿಷಯ ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ.

ಬೇಗಂಪೇಟೆಯಲ್ಲಿ ನಿರ್ಮಿಸಿರುವ ಕೆಸಿಆರ್ ನೂತನ ಮನೆ ಗೃಹ ಪ್ರವೇಶದ ವೇಳೆ, ಮನೆಯಲ್ಲಿರುವ ಸಿಎಂ ಅಧಿಕೃತ ಕಚೇರಿಯಲ್ಲಿರುವ ಕುರ್ಚಿ ಮೇಲೆ ಸ್ವಾಮೀಜಿ ಆಸೀನರಾಗಿದ್ದುದ್ದು, ಟೀಕೆಗೆ ಕಾರಣವಾಗಿದೆ.

ಕೆಲವರು ಇದನ್ನು ವಿರೋಧಿಸಿದರೆ ಮತ್ತೆ ಕೆಲವರು ಸಮರ್ಥಿಸಿಕೊಂಡಿದ್ದಾರೆ. ಬಿಜೆಪಿ ಎಂಎಲ್ ಸಿ ಎನ್ ರಾಮಚಂದ್ರ ರಾವ್, ಮುಖ್ಯಮಂತ್ರಿ ಜನರಿಂದ ಆರಿಸಿ ಬಂದವರು, ಆ ಸ್ಥಾನಕ್ಕೆ ಅವರು ಮರ್ಯಾದೆ ನೀಡಬೇಕಾಗಿದೆ. ಇಂತ ಪ್ರಸಂಗಗಳಿಂದ ಅಹಿತಕರ ವಾತಾನರಣ ಸೃಷ್ಟಿಯಾಗುತ್ತದೆ. ಸ್ವಾಮೀಜಿಗಳ ಬಗ್ಗೆ ಜನತೆಗೆ ಅಪಾರ ಗೌರವವಿರುತ್ತದೆ. ಸಿಎಂ ಅಧಿಕತ ಕುರ್ಚಿಯನ್ನು ಯಾವುದೇ ಕಾರಣಕ್ಕೂ ದುರುಪಯೋಗ ಪಡಿಸಿಕೊಳ್ಳಬಾರದು ಎಂದು ಸಲಹೆ ನೀಡಿದ್ದಾರೆ.

ಅಭಿವೃದ್ಧಿ ಯೋಜನೆಗಳಿಗೆ ಬಿಡುಗಡೆ ಮಾಡಲು ಸರ್ಕಾರದ ಬಳಿ ಹಣವಿಲ್ಲ, ಇಂಥ ಸಂದರ್ಭದಲ್ಲಿ ಕೋಟಿಗಟ್ಟಲೇ ಹಣ ಖರ್ಚು ಮಾಡಿ ಇಷ್ಟೊಂದು ಐಷಾರಾಮಿ ಮನೆ ನಿರ್ಮಿಸುವ ಅವಶ್ಯಕತೆಯಾದರು ಏನಿತ್ತು ಎಂದು ಅವರಪ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT