ಸಿಎಂ ಕುರ್ಚಿಯಲ್ಲಿ ಕುಳಿತಿರುವ ಸ್ವಾಮೀಜಿ 
ದೇಶ

ತೆಲಂಗಾಣ ಸಿಎಂ ಕುರ್ಚಿಯಲ್ಲಿ ಕುಳಿತ ಸ್ವಾಮೀಜಿ: ಎಲ್ಲೆಡೆ ಬಿಸಿಬಿಸಿ ಚರ್ಚೆ

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಸಿಎಂ ಕುರ್ಚಿಯಲ್ಲಿ ಸ್ವಾಮೀಜಿ ತ್ರಿದಂಡಿ ಶ್ರೀರಾಮಾನಾರಾಯಣ ರಾಮಾನುಜ ಚಿನ್ನ ಜಿಯಾರ್ ...

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಸಿಎಂ ಕುರ್ಚಿಯಲ್ಲಿ ಸ್ವಾಮೀಜಿ ತ್ರಿದಂಡಿ ಶ್ರೀರಾಮಾನಾರಾಯಣ ರಾಮಾನುಜ ಚಿನ್ನ ಜಿಯಾರ್ ಸ್ವಾಮಿ ಕುಳಿತ ವಿಷಯ ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ.

ಬೇಗಂಪೇಟೆಯಲ್ಲಿ ನಿರ್ಮಿಸಿರುವ ಕೆಸಿಆರ್ ನೂತನ ಮನೆ ಗೃಹ ಪ್ರವೇಶದ ವೇಳೆ, ಮನೆಯಲ್ಲಿರುವ ಸಿಎಂ ಅಧಿಕೃತ ಕಚೇರಿಯಲ್ಲಿರುವ ಕುರ್ಚಿ ಮೇಲೆ ಸ್ವಾಮೀಜಿ ಆಸೀನರಾಗಿದ್ದುದ್ದು, ಟೀಕೆಗೆ ಕಾರಣವಾಗಿದೆ.

ಕೆಲವರು ಇದನ್ನು ವಿರೋಧಿಸಿದರೆ ಮತ್ತೆ ಕೆಲವರು ಸಮರ್ಥಿಸಿಕೊಂಡಿದ್ದಾರೆ. ಬಿಜೆಪಿ ಎಂಎಲ್ ಸಿ ಎನ್ ರಾಮಚಂದ್ರ ರಾವ್, ಮುಖ್ಯಮಂತ್ರಿ ಜನರಿಂದ ಆರಿಸಿ ಬಂದವರು, ಆ ಸ್ಥಾನಕ್ಕೆ ಅವರು ಮರ್ಯಾದೆ ನೀಡಬೇಕಾಗಿದೆ. ಇಂತ ಪ್ರಸಂಗಗಳಿಂದ ಅಹಿತಕರ ವಾತಾನರಣ ಸೃಷ್ಟಿಯಾಗುತ್ತದೆ. ಸ್ವಾಮೀಜಿಗಳ ಬಗ್ಗೆ ಜನತೆಗೆ ಅಪಾರ ಗೌರವವಿರುತ್ತದೆ. ಸಿಎಂ ಅಧಿಕತ ಕುರ್ಚಿಯನ್ನು ಯಾವುದೇ ಕಾರಣಕ್ಕೂ ದುರುಪಯೋಗ ಪಡಿಸಿಕೊಳ್ಳಬಾರದು ಎಂದು ಸಲಹೆ ನೀಡಿದ್ದಾರೆ.

ಅಭಿವೃದ್ಧಿ ಯೋಜನೆಗಳಿಗೆ ಬಿಡುಗಡೆ ಮಾಡಲು ಸರ್ಕಾರದ ಬಳಿ ಹಣವಿಲ್ಲ, ಇಂಥ ಸಂದರ್ಭದಲ್ಲಿ ಕೋಟಿಗಟ್ಟಲೇ ಹಣ ಖರ್ಚು ಮಾಡಿ ಇಷ್ಟೊಂದು ಐಷಾರಾಮಿ ಮನೆ ನಿರ್ಮಿಸುವ ಅವಶ್ಯಕತೆಯಾದರು ಏನಿತ್ತು ಎಂದು ಅವರಪ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

KPCCಗೆ ಮೇಜರ್ ಸರ್ಜರಿ: ನಟಿ ಭಾವನಾ, ನಿಕೇತ್ ರಾಜ್ ಮೌರ್ಯ ಸೇರಿ 31 ಪದಾಧಿಕಾರಿಗಳಿಗೆ ಗೇಟ್‌ಪಾಸ್‌!

ನಾವು ಕಳವಳ ವ್ಯಕ್ತಪಡಿಸಿದೆವು, ಆದ್ರೆ ಸಿದ್ದರಾಮಯ್ಯ ಸೈಲೆಂಟ್ ಆಗಿದ್ದರು: ಸಚಿವ ಎಚ್.ಕೆ.ಪಾಟೀಲ್

ಗ್ಯಾಂಗ್ ರೇಪ್ ಪ್ರಕರಣ: ವಿವಾದಿತ ದೇವಮಾನವ Asaram Bapu ಖುಲಾಸೆ

SCROLL FOR NEXT