ನಮ್ಮ ಹಿತಾಸಕ್ತಿಗಳ ಬಗ್ಗೆಯೂ ಗಮನವಿರಲಿ: ಚೀನಾಗೆ ಭಾರತ 
ದೇಶ

ನಮ್ಮ ಹಿತಾಸಕ್ತಿಗಳ ಬಗ್ಗೆಯೂ ಗಮನವಿರಲಿ: ಚೀನಾಗೆ ಭಾರತ

ಚೀನಾದೊಂದಿಗಿನ ದ್ವಿಪಕ್ಷೀಯ ಸಂಬಂಧದ ಬಗ್ಗೆ ಮಾತನಾಡಿರುವ ವಿದೇಶಾಂಗ ಇಲಾಖೆ ಕಾರ್ಯದರ್ಶಿ ಎಸ್ ಜೈಶಂಕರ್, ಚೀನಾದೊಂದಿಗೆ ವ್ಯಾವಹಾರಿಕ ರೀತಿಯಲ್ಲೇ ಮಾತುಕತೆ ಮುಂದುವರೆಸಲಿದ್ದೇವೆ...

ನವದೆಹಲಿ: ಚೀನಾದೊಂದಿಗಿನ ದ್ವಿಪಕ್ಷೀಯ ಸಂಬಂಧದ ಬಗ್ಗೆ ಮಾತನಾಡಿರುವ ವಿದೇಶಾಂಗ ಇಲಾಖೆ ಕಾರ್ಯದರ್ಶಿ ಎಸ್ ಜೈಶಂಕರ್, ಚೀನಾದೊಂದಿಗೆ ವ್ಯಾವಹಾರಿಕ ರೀತಿಯಲ್ಲೇ ಮಾತುಕತೆ ಮುಂದುವರೆಸಲಿದ್ದೇವೆ ಎಂದು ಹೇಳಿದ್ದಾರೆ. 
ಚೀನಾ ಭಾರತದ ಆಶೋತ್ತರ, ಹಿತಾಸಕ್ತಿಗಳನ್ನೂ ಗಮನದಲ್ಲಿಟ್ಟುಕೊಂಡು ದ್ವಿಪಕ್ಷೀಯ ಸಂಬಂಧವನ್ನು ಬೆಸೆಯಬೇಕಿದೆ, ಅದಕ್ಕೆ ಅನುಗುಣವಾಗಿಯೇ ನಾವು ಚೀನಾದೊಂದಿಗೆ ಮಾನಾಡಬೇಕು ಹಾಗೆಯೇ ಮಾತನಾಡುತ್ತೇವೆ ಎಂದು ಜೈ ಶಂಕರ್ ತಿಳಿಸಿದ್ದಾರೆ. ಭಾರತದ ಎಸ್ಎಸ್ ಜಿ ಸದಸ್ಯತ್ವ, ಉಗ್ರ ಮಸೂದ್ ಅಜರ್ ಗೆ ನಿಷೇಧ ವಿಧಿಸುವುದು ಸೇರಿದಂತೆ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತದ ಹಲವು ಯತ್ನಗಳಿಗೆ ಚೀನಾ ಅಡ್ಡಿ ಉಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ಚೀನಾದೊಂದಿಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಚೀನಾ ಭಾರತದ ಹಿತಾಸಕ್ತಿಗಳ ಬಗ್ಗೆಯೂ ಗಮನವಿರಲಿ ಎಂದು ಸಲಹೆ ನೀಡಿದೆ.  
ಇತ್ತೀಚೆಗಷ್ಟೇ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಚೀನಾ ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನು ಭೇಟಿ ಮಾಡಿ ಚರ್ಚಿಸಿದ್ದರು. ಈ ಭೇಟಿಯ ನಂತರ ಚೀನಾ-ಭಾರತ ದ್ವಿಪಕ್ಷೀಯ ಸಂಬಂಧದ ಬಗ್ಗೆ ಜೈಶಂಕರ್ ಪ್ರತಿಕ್ರಿಯೆ ನೀಡಿದ್ದು ನಮ್ಮ ಹಿತಾಸಕ್ತಿಗಳ ಬಗ್ಗೆಯೂ ಚೀನಾಗೆ ಗಮನ ಇರಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT