ಮನೋಹರ್ ಪರಿಕ್ಕರ್ 
ದೇಶ

ಪ್ರತೀಕಾರ ನಿಲ್ಲಿಸುವಂತೆ ಭಾರತಕ್ಕೆ ಪಾಕ್ ಮನವಿ: ರಕ್ಷಣಾ ಸಚಿವ ಪರಿಕ್ಕರ್

ನಮ್ಮ ಯೋಧರ ಶಿರಚ್ಛೇಧಕ್ಕೆ ಪ್ರತಿಯಾಗಿ ಪಾಕಿಸ್ತಾನ ಸೇನಾ ಶಿಬಿರಗಳ ಮೇಲೆ ದಾಳಿ ಮಾಡದಂತೆ ಪಾಕಿಸ್ತಾನ ಭಾರತಕ್ಕೆ ಮನವಿ ಮಾಡಿದೆ...

ನವದೆಹಲಿ: ನಮ್ಮ ಯೋಧರ ಶಿರಚ್ಛೇಧಕ್ಕೆ ಪ್ರತಿಯಾಗಿ ಪಾಕಿಸ್ತಾನ ಸೇನಾ ಶಿಬಿರಗಳ ಮೇಲೆ ದಾಳಿ ಮಾಡದಂತೆ ಪಾಕಿಸ್ತಾನ ಭಾರತಕ್ಕೆ ಮನವಿ ಮಾಡಿದೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಹೇಳಿದ್ದಾರೆ.
ಗೋವಾದ ಸಂಖಲಿಮ್ ಗ್ರಾಮದಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಕ್ಷಣಾ ಸಚಿವರು, ಕಳೆದ ರಾತ್ರಿ ಪಾಕಿಸ್ತಾನದಿಂದ ಕರೆ ಬಂದಿದ್ದು, ಪ್ರತೀಕಾರ ನಿಲ್ಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಹೀಗಾಗಿ ಪಾಕಿಸ್ತಾನ ಸೇನೆ ತಕ್ಕ ಪ್ರತ್ಯುತ್ತರ ನೀಡುತ್ತಿರುವ ಭಾರತ ಕಳೆದ ಎರಡು ದಿನಗಳಿಂದ ಗಡಿಯಲ್ಲಿ ಗುಂಡಿನ ದಾಳಿಯನ್ನು ನಿಲ್ಲಿಸಿದೆ ಎಂದು ಹೇಳಿದರು.
ಕಳೆದ ಮಂಗಳವಾರ ಪಾಕ್ ಸೇನೆ ಭಾರತೀಯ ಯೋಧನ ಶಿರಚ್ಛೇಧ ಮಾಡಿತ್ತು. ಇದಾದ ಬಳಿಕ ಭಾರತೀಯ ಸೇನೆ ಪೂಂಚ್, ರಾಜೌರಿ, ಕೇಲ್, ಮಚಿಲ್ ಸೆಕ್ಟರ್ ನಲ್ಲಿ ಪಾಕ್ ಸೇನಾ ಶಿಬಿರಗಳ ಮೇಲೆ ತೀವ್ರ ಗುಂಡಿನ ದಾಳಿ ನಡೆಸಿತ್ತು ಎಂದು ಪರಿಕ್ಕರ್ ವಿವರಿಸಿದ್ದಾರೆ.
ದಾಳಿ ನಿಲ್ಲಿಸುವುದಕ್ಕೆ ನಮ್ಮ ಅಭ್ಯಂತರವೇನಿಲ್ಲ ಮತ್ತು ನಮಗೂ ಅದರಲ್ಲಿ ಆಸಕ್ತಿ ಇಲ್ಲ. ಆದರೆ ನೀವೂ ಕನದ ವಿರಾಮ ಉಲ್ಲಂಘನೆ ಮತ್ತು ಅಪ್ರಚೋದಿತ ಗುಂಡಿನ ದಾಳಿಯನ್ನು ಮೊದಲು ನಿಲ್ಲಿಸಿ ಎಂದು ಹೇಳಿರುವುದಾಗಿ ಪರಿಕ್ಕರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

SCROLL FOR NEXT