ಸರ್ತಾಜ್ ಅಜೀಜ್ 
ದೇಶ

ಹಾರ್ಟ್ ಆಫ್ ಏಷ್ಯಾ ಸಮ್ಮೇಳನ: ಪಾಕ್ ಪ್ರತಿನಿಧಿಯ ಭಾರತ ಭೇಟಿ ಮೊಟಕು, ದ್ವಿಪಕ್ಷೀಯ ಮಾತುಕತೆ ಸಾಧ್ಯತೆ ಕ್ಷೀಣ

ಡಿ.4 ರಂದು ಅಮೃತ್ ಸರದಲ್ಲಿ ನಡೆಯಲಿರುವ ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಪಾಕ್ ಪ್ರತಿನಿಧಿ ಸರ್ತಾಜ್ ಅಜೀಜ್ ಭಾಗವಹಿಸುವಿಕೆ ಸೀಮಿತ ಅವಧಿಗೆ ನಿಗದಿಯಾಗಿದ್ದು...

ನವದೆಹಲಿ: ಡಿ.4 ರಂದು ಅಮೃತ್ ಸರದಲ್ಲಿ ನಡೆಯಲಿರುವ ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಪಾಕ್ ಪ್ರತಿನಿಧಿ ಸರ್ತಾಜ್ ಅಜೀಜ್ ಭಾಗವಹಿಸುವಿಕೆ ಸೀಮಿತ ಅವಧಿಗೆ ನಿಗದಿಯಾಗಿದ್ದು, ಭಾರತ-ಪಾಕ್ ದ್ವಿಪಕ್ಷೀಯ ಮಾತುಕತೆ ಸಾಧ್ಯತೆ ಕ್ಷೀಣಿಸಿದೆ. 
ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ ಪಾಕಿಸ್ತಾನದ ಪ್ರತಿನಿಧಿಯಾಗಿ ಪಾಕ್ ಪ್ರಧಾನಿಯ ವಿದೇಶಾಂಗ ವಿಷಯಗಳ ಸಲಹೆಗಾರ ಸರ್ತಾಜ್ ಅಜೀಜ್ ಡಿ.4 ರಂದೇ ಅಮೃತ್ ಸರಕ್ಕೆ ಬಂದು ಅಂದೇ ಸಂಜೆ ಪಾಕಿಸ್ತಾನಕ್ಕೆ ತೆರಳಲಿದ್ದಾರೆ ಎಂದು ಪಾಕಿಸ್ತಾನ ಸ್ಪಷ್ಟಪಡಿಸಿದೆ. ಉಳಿದ ದೇಶಗಳ ಪ್ರತಿನಿಧಿಗಳು ಸಮ್ಮೇಳನಕ್ಕೆ ಒಂದು ದಿನ ಮುಂಚಿತವಾಗಿ ನವದೆಹಲಿಗೆ ಆಗಮಿಸಿದರೆ ಸರ್ತಾಜ್ ಅಜೀಜ್ ಭಾರತ ಭೇಟಿಯನ್ನು ಸಾಧ್ಯವಾದಷ್ಟು ಮೊಟಕುಗೊಳಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತ-ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಮಾತುಕತೆ ಕ್ಷೀಣಿಸುವ ಸಾಧ್ಯತೆ ದಟ್ಟವಾಗಿದೆ. 
ಆದರೆ ದ್ವಿಪಕ್ಷೀಯ ಮಾತುಕತೆ ನಡೆಯುವುದು ನಡೆಯದೇ ಇರುವುದರ ಬಗ್ಗೆ ಈ ವರೆಗೂ ಯಾವುದೇ ಅಧಿಕೃತ ನಿರ್ಧಾರ ಹೊರಬಿದ್ದಿಲ್ಲ, ದ್ವಿಪಕ್ಷೀಯ ಮಾತುಕತೆ ನಡೆಯುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಇಲಾಖೆ ಕಾರ್ಯದರ್ಶಿ ವಿಕಾಸ್ ಸ್ವರೂಪ್ ದ್ವಿಪಕ್ಷೀಯ ಮಾತುಕತೆ ನಡೆಯುವುದರ ಬಗ್ಗೆ ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT