ಭಾರತದೊಂದಿಗೆ ವ್ಯಾಪಾರ ವಹಿವಾಟು ಬಾಂಧವ್ಯ ಕಡಿತಕ್ಕೆ ಪಾಕ್ ಪ್ರತಿಪಕ್ಷಗಳ ಆಗ್ರಹ 
ದೇಶ

ಭಾರತದೊಂದಿಗೆ ವ್ಯಾಪಾರ ವಹಿವಾಟು ಬಾಂಧವ್ಯ ಕಡಿತಕ್ಕೆ ಪಾಕ್ ಪ್ರತಿಪಕ್ಷಗಳ ಆಗ್ರಹ

ಪಾಕಿಸ್ತಾನದ ವಿಪಕ್ಷಗಳು ಭಾರತದೊಂದಿಗಿನ ವ್ಯಾಪಾರ ವಹಿವಾಟು ಬಾಂಧವ್ಯ ಕಡಿತಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಿವೆ.

ಇಸ್ಲಾಮಾಬಾದ್: ಪಾಕಿಸ್ತಾನದ ವಿಪಕ್ಷಗಳು ಭಾರತದೊಂದಿಗಿನ ವ್ಯಾಪಾರ ವಹಿವಾಟು ಬಾಂಧವ್ಯ ಕಡಿತಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಿವೆ. 
ಗಡಿ ನಿಯಂತ್ರಣ ರೇಖೆಯಲ್ಲಿ ತನ್ನ 10 ನಾಗರಿಕರನ್ನು ಹಾಗೂ ಮೂವರು ಯೋಧರನ್ನು ಭಾರತೀಯ ಸೇನೆ ಹತ್ಯೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರತಿಪಕ್ಷ ತೆಹ್ರೀಕ್-ಇ-ಇನ್ಸಾಫ್ ನ ಅಧ್ಯಕ್ಷ ಷಾ ಮೆಹಮೂದ್ ಖುರೇಷಿ, ಪಾಕಿಸ್ತಾನ ಸರ್ಕಾರ ತಕ್ಷಣವೇ ಭಾರತದೊಂದಿಗಿನ ವ್ಯಾಪಾರ ವಹಿವಾಟು ಬಾಂಧವ್ಯವನ್ನು ಕಡಿತಗೊಳಿಸಬೇಕು ಎಂದು ಹೇಳಿದ್ದಾರೆ. 
ದೇಶವನ್ನು ರಕ್ಷಿಸಲು ಪ್ರಧಾನಿ ನವಾಜ್ ಷರೀಫ್ ಹಾಗೂ ರಕ್ಷಣಾ ಸಚಿವ ಖವಾಜಾ ಅಸೀಫ್ ಗಡಿಯಲ್ಲಿರಬೇಕಿತ್ತು. ಆದರೆ ಅವರಿಗೆ ಭಾರತದೊಂದಿಗಿನ ಬಾಂಧವ್ಯ ಮುಖ್ಯವಾಗಿದೆ ಎಂದು ಖುರೇಷಿ ಆರೋಪಿಸಿದ್ದಾರೆ. ಭಾರತೀಯ ಸೇನೆ ಪಾಕ್ ಆಕ್ರಮಿತ ಪ್ರದೇಶದಲ್ಲಿ ಸೀಮಿತ ದಾಳಿ ನಡೆಸಿದ ಬಳಿಕ ಗಡಿಯಲ್ಲಿ ಪಾಕ್ ಸೇನೆ ಗಡಿಯಲ್ಲಿ ದಾಳಿ ನಡೆಸಲು ಪ್ರಾರಂಭಿಸಿದೆ. ಪಾಕ್ ಸೇನೆಗೆ ಪ್ರತ್ಯುತ್ತರ ನೀಡಿರುವ ಭಾರತೀಯ ಸೇನೆ ಪಾಕಿಸ್ತಾನದ ಮೂವರು ಯೋಧರನ್ನು ಹೊಡೆದುರುಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BiggBoss Kannada: ಜಾಲಿವುಡ್​ ಸ್ಟುಡಿಯೋಸ್​ಗೆ ಬೀಗ, ಮನೆ ಖಾಲಿ ಮಾಡಲು ಬಿಗ್‌ಬಾಸ್‌ ಸ್ಪರ್ಧಿಗಳಿಗೆ 1 ಗಂಟೆ ಗಡುವು!

ತಮ್ಮದೇ ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಹರಿಯಾಣ ಎಡಿಜಿಪಿ ಆತ್ಮಹತ್ಯೆ!

CM ಬದಲಾವಣೆ ಹೇಳಿಕೆಗಳಿಗೆ 'ಬ್ರೇಕ್ ಹಾಕಿ': ಕಾಂಗ್ರೆಸ್ ಹೈಕಮಾಂಡ್​​ಗೆ ಹಿರಿಯ ಸಚಿವರ ಆಗ್ರಹ

ಮಾರಣಾಂತಿಕ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ, ಬಿಜೆಪಿ ಸಂಸದನ ಆರೋಗ್ಯ ವಿಚಾರಿಸಿದ ಮಮತಾ

ಇದು 'ಮೋದಾನಿ-ನಿರ್ಭರ್ ಭಾರತ': ಸರ್ಕಾರದ ಹಳದಿ ಬಟಾಣಿ ಆಮದು ನೀತಿ ಟೀಕಿಸಿದ ಕಾಂಗ್ರೆಸ್

SCROLL FOR NEXT