ದೇಶ

ಭಾರತ-ಪಾಕ್ ನಡುವಿನ ನೀರಿನ ಸಮಸ್ಯೆಯನ್ನು ಆ ರಾಷ್ಟ್ರಗಳೇ ಪರಿಹರಿಸಿಕೊಳ್ಳಲಿವೆ: ಬಾನ್ ಕಿ ಮೂನ್

ಭಾರತ-ಪಾಕಿಸ್ತಾನದ ನಡುವೆ ಇರುವ ನೀರಿನ ಸಮಸ್ಯೆಯನ್ನು ಆ ಎರಡು ರಾಷ್ಟ್ರಗಳೇ ಬಗೆಹರಿಸಿಕೊಳ್ಳಲಿವೆ ಎಂಬ ವಿಶ್ವಾಸವಿದೆ ಎಂದು ವಿಶ್ವಸಂಸ್ಥೆ ಕಾರ್ಯದರ್ಶಿ ಬಾನ್ ಕಿ-ಮೂನ್ ಹೇಳಿದ್ದಾರೆ.

ವಿಶ್ವಸಂಸ್ಥೆ: ಭಾರತ-ಪಾಕಿಸ್ತಾನದ ನಡುವೆ ಇರುವ ನೀರಿನ ಸಮಸ್ಯೆಯನ್ನು ಆ ಎರಡು ರಾಷ್ಟ್ರಗಳೇ ಬಗೆಹರಿಸಿಕೊಳ್ಳಲಿವೆ ಎಂಬ ವಿಶ್ವಾಸವಿದೆ ಎಂದು ವಿಶ್ವಸಂಸ್ಥೆ ಕಾರ್ಯದರ್ಶಿ ಬಾನ್ ಕಿ-ಮೂನ್ ಹೇಳಿದ್ದಾರೆ. 
ನೀರಿನ ವಿವಾದ ಬಗ್ಗೆ ನಾವು ಗಮನಹರಿಸುತ್ತೇವೆ, ಆದರೆ ಭಾರತ-ಪಾಕಿಸ್ತಾನಗಳೇ ಆ ವಿವಾದಗಳನ್ನು ಬಗೆಹರಿಸಿಕೊಳ್ಳುತ್ತವೆ ಎಂಬ ವಿಶ್ವಾಸವಿದೆ ಎಂದು ಬಾನ್ ಕಿ-ಮೂನ್ ಅವರ ವಕ್ತಾರ ಸ್ಟೀಫನ್ ಡುಜರ್ರಿಕ್ ಹೇಳಿದ್ದಾರೆ. ಭಾರತ-ಪಾಕ್ ನಡುವೆ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿರುವ ಸಂದರ್ಭದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ಹರಿಯುತ್ತಿರುವ ಸಿಂಧೂ ನದಿ ನೀರನ್ನು ನಿಲ್ಲಿಸುವ ಬಗ್ಗೆ ಹೇಳಿಕೆ ನೀಡಿದ್ದರು ಈ ಬೆನ್ನಲ್ಲೇ ವಿಶ್ವಸಂಸ್ಥೆ ಕಾರ್ಯದರ್ಶಿ ಪ್ರತಿಕ್ರಿಯೆ ನೀಡಿದ್ದಾರೆ. 
ಇದೇ ವೇಳೆ ಭಾರತ-ಪಾಕಿಸ್ತಾನದ ದ್ವಿಪಕ್ಷೀಯ ಸಂಬಂಧದ ಬಗ್ಗೆ ಮಾತನಾಡಿರುವ ಬಾನ್ ಕಿ-ಮೂನ್, ಭಾರತ-ಪಾಕ್ ನಡುವಿನ ಸಂಬಂಧ ಹದಗೆಟ್ಟಿರುವುದು ಆತಂಕಕಾರಿ ಸಂಗತಿ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿ.26ರಿಂದ ರೈಲ್ವೆ ಪ್ರಯಾಣ ದರ ಏರಿಕೆ; 500 ಕಿ.ಮೀವರೆಗಿನ ಪ್ರಯಾಣಕ್ಕೆ ನಾನ್ ಎಸಿ ರೈಲುಗಳಲ್ಲಿ 10 ರೂ. ಹೆಚ್ಚಳ!

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿ ನೇತೃತ್ವದ ಮಹಾಯುತಿ ಮ್ಯಾಜಿಕ್; ಅಘಾಡಿ ಗಾಡಿ ಪಂಕ್ಚರ್!

Pakistan: 17 ವರ್ಷ ಜೈಲು ಶಿಕ್ಷೆ ಹಿನ್ನೆಲೆ, ದೇಶಾದ್ಯಂತ ಬೀದಿಗಿಳಿದು ಹೋರಾಟಕ್ಕೆ ಸಜ್ಜಾಗಿ, ಇಮ್ರಾನ್ ಖಾನ್ ಕರೆ!

ಬೆಂಗಳೂರು: ರಾಷ್ಟ್ರೀಯ 'ಪಲ್ಸ್ ಪೋಲಿಯೊ ಲಸಿಕಾ' ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ರಾಜ್ಯದಲ್ಲಿ 'ಸೀಸನಲ್ ಫ್ಲೂ' ಹೆಚ್ಚಳ ಹಿನ್ನೆಲೆ: ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ!

SCROLL FOR NEXT