ವಿತ್ತ ಸಚಿವ ಅರುಣ್ ಜೇಟ್ಲಿ (ಸಂಗ್ರಹ ಚಿತ್ರ) 
ದೇಶ

ಜನ ಕಲ್ಯಾಣಕ್ಕೆ "ಕಪ್ಪುಹಣ"; ಶೇ.30ರಷ್ಟು ಹಣ ಬಡವರ ಕಲ್ಯಾಣ ಯೋಜನೆಗಳಿಗೆ ಬಳಕೆ

ಕಾಳಧನಿಕರು ತಮ್ಮ ಬಳಿ ಇರುವ ಕಪ್ಪುಹಣ ಬಿಳಿಯಾಗಿಸಲು ಕೇಂದ್ರ ಸರ್ಕಾರ ಮತ್ತೊಂದು ಅವಕಾಶ ನೀಡಿದ್ದು, ಈಗಲೇ ಕಪ್ಪುಹಣ ಘೋಷಣೆ ಮಾಡಿದರೆ ಶೇ.50ರಷ್ಟು ತೆರಿಗೆಯೊಂದಿಗೆ ಆಘೋಷಿತ ಮೊತ್ತ ಬಿಳಿಯಾಗಲಿದೆ.

ನವದೆಹಲಿ: ಕಾಳಧನಿಕರು ತಮ್ಮ ಬಳಿ ಇರುವ ಕಪ್ಪುಹಣ ಬಿಳಿಯಾಗಿಸಲು ಕೇಂದ್ರ ಸರ್ಕಾರ ಮತ್ತೊಂದು ಅವಕಾಶ ನೀಡಿದ್ದು, ಈಗಲೇ ಕಪ್ಪುಹಣ ಘೋಷಣೆ ಮಾಡಿದರೆ ಶೇ.50ರಷ್ಟು ತೆರಿಗೆಯೊಂದಿಗೆ ಆಘೋಷಿತ ಮೊತ್ತ  ಬಿಳಿಯಾಗಲಿದೆ.

ಕೇಂದ್ರ ಸರ್ಕಾರದ ಪ್ರಸ್ತಾವಿತ ನೂತನ ಮಸೂದೆಯಲ್ಲಿ ಕಪ್ಪುಹಣ ಹೊರಗೆಳೆಯಲು ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಈ ಪೈಕಿ ಸ್ವಯಂ ಪ್ರೇರಿತವಾಗಿ ಕಪ್ಪುಹಣ ಅಥವಾ ಅಘೋಷಿತ ಹಣವನ್ನು ತೆರಿಗೆ ಇಲಾಖೆ ಎದುರು  ಘೋಷಿಸಿಕೊಂಡರೆ ಶೇ.50 ತೆರಿಗೆ ಪಾವತಿಸಿ, ಉಳಿದ ಹಣವನ್ನು ಸಕ್ರಮಗೊಳಿಸಲು ಕೇಂದ್ರ ಸರ್ಕಾರ ಮಸೂದೆಯಲ್ಲಿ ಅವಕಾಶ ನೀಡಿದೆ. ಒಂದು ವೇಳೆ ಈ ಅವಧಿಯಲ್ಲೂ ಕಪ್ಪುಹಣ ಘೋಷಣೆ ಮಾಡದವರ ವಿರುದ್ಧ ಕೇಂದ್ರ  ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದ್ದು, ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ವೇಳೆ ಸಿಕ್ಕಿಬಿದ್ದ ಕಾಳಧನಿಕರಿಗೆ ಶೇ.75ರಷ್ಟು ತೆರಿಗೆ ಮತ್ತು ಶೇ.10ರಷ್ಟು ಹಣವನ್ನು ದಂಡವಾಗಿ ವಿಧಿಸುವ ಕಠಿಣ ಕಾನೂನು ಜಾರಿಗೆ ನಿರ್ಧರಿಸಿದೆ ಎಂದು  ಹೇಳಲಾಗುತ್ತಿದೆ.

ಇನ್ನು ಸ್ವಯಂಘೋಷಿತ ಕಾಳಧನಿಕರಿಂದ ಬಂದ ತೆರಿಗೆ ಹಣದ ಪೈಕಿ ಶೇ.33ರಷ್ಟು ಹಣವನ್ನು ಬಡವರ ಕಲ್ಯಾಣ ಯೋಜನೆಗೆ ಬಳಕೆಕೊಳ್ಳಲಾಗುತ್ತದೆ. ಉಳಿದ ಶೇ.25ರಷ್ಟು ಹಣವನ್ನು ಆರ್ ಬಿಐ ನಿಗದಿ ಪಡಿಸಿದ ಯೋಜನೆಯಲ್ಲಿ  ಹೂಡಿಕೆ ಮಾಡಲಾಗುತ್ತದೆ. ಹೀಗೆ ಕಾಳಧನಿಕರಿಂದ ಸರ್ಕಾರದ ಬೊಕ್ಕಸ ಸೇರುವ ಹಣವನ್ನು ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದವರು, ದುರ್ಬಲರ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಜಾರಿಗೆ  ಮುಂದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

SCROLL FOR NEXT