ನಿತೀಶ್ ಕುಮಾರ್ 
ದೇಶ

ರಾಜಕೀಯವಾಗಿ ನನ್ನನ್ನು ಕೊಲೆ ಮಾಡಲು ವಿರೋಧಿಗಳ ಷಡ್ಯಂತ್ರ: ನಿತೀಶ್ ಕುಮಾರ್

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗಿದ್ದೇನೆ ಹಾಗೂ ಪ್ರಧಾನಿ ಮೋದಿ ಅವರ ಜೊತೆ ಫೋನಿನಲ್ಲಿ ಸಂಭಾಷಣೆ ನಡೆಸಿದ್ದೇನೆ ಎಂಬ ಹೇಳಿಕೆಗಳೆಲ್ಲಾ ...

ಪಾಟ್ನಾ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗಿದ್ದೇನೆ ಹಾಗೂ ಪ್ರಧಾನಿ ಮೋದಿ ಅವರ ಜೊತೆ ಫೋನಿನಲ್ಲಿ ಸಂಭಾಷಣೆ ನಡೆಸಿದ್ದೇನೆ ಎಂಬ ಹೇಳಿಕೆಗಳೆಲ್ಲಾ ಆಧಾರರಹಿತವಾದದ್ದು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.

ಪಾಟ್ನಾದಲ್ಲಿ ಪಕ್ಷದ ಕಾರ್ಯಕರ್ತರ ಸಭೆ ನಂತರ ಮಾತನಾಡಿದ ನಿತೀಶ್ ಕುಮಾರ್ ಮೋದಿ ಅವರ ನೋಟು ನಿಷೇಧ ಕ್ರಮಕ್ಕೆ ನಾನು ಬೆಂಬಲ ವ್ಯಕ್ತ ಪಡಿಸಿದ ಹಿನ್ನೆಲೆಯಲ್ಲಿ ನನ್ನ ಕೆಲ ವಿರೋಧಿಗಳು ಇಲ್ಲ ಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಇದೆಲ್ಲಾ ಆಧಾರರಹಿತವಾದದ್ದು ಎಂದು ಸಮರ್ಥಿಸಿಕೊಂಡರು.

ಪ್ರಧಾನಿ ನರೇಂದ್ರ ಮೋದಿ ನೋಟು ನಿಷೇದಿಸಿರುವುಹು ಹುಲಿಯ ಮೇಲೆ ಸವಾರಿ ಮಾಡಿದಂತೆ ಎಂದು ನಿತೀಶ್ ಕುಮಾರ್ ಹೇಳಿಕೆ ನೀಡಿದ್ದರು. ನೋಟು ನಿಷೇಧಕ್ಕೆ ಬೆಂಬಲ ಸೂಚಿಸಿರುವುದಕ್ಕೆ ನಿತೀಶ್ ಕುಮಾರ್ ಅವರಿಗೆ ಧನ್ಯವಾದಗಳು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಟ್ವೀಟ್ ಮಾಡಿದ್ದರು.

ನಾನು ಭ್ರಷ್ಟಾಚಾರ ವನ್ನು ವಿರೋಧಿಸುತ್ತೇನೆ. ಹಾಗಾಗಿ ಮೋದಿ ಅವರ ನಿರ್ಧಾರಕ್ಕೆ ಬೆಂಬಲ ಸೂಚಿಸಿದ್ದೇನೆ, ಅದಕ್ಕೂ ಹೊರತು ಅವರ ಜೊತೆ ಯಾವುದೇ ರಾಜಕೀಯ ಮೈತ್ರಿಗಳು ಇಲ್ಲ ಎಂದು ಕಾರ್ಯಕರ್ತರ ಸಭೆಯಲ್ಲಿ ಸ್ಪಷ್ಟ ಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT