ಸಂಗ್ರಹ ಚಿತ್ರ 
ದೇಶ

ನಭಾ ಜೈಲಿನಿಂದ ಉಗ್ರರು ಪರಾರಿ ಪ್ರಕರಣ; ಉಪ ಜೈಲು ಅಧೀಕ್ಷಕ ಸೇರಿ ಮೂವರ ಬಂಧನ

ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಪಂಜಾಬ್ ನ ನಭಾ ಕೇಂದ್ರೀಯ ಕಾರಾಗೃಹದಿಂದ ಉಗ್ರರು ಪರಾರಿಯಾದ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಮಂಗಳವಾರ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಚಂಡೀಘಡ: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಪಂಜಾಬ್ ನ ನಭಾ ಕೇಂದ್ರೀಯ ಕಾರಾಗೃಹದಿಂದ ಉಗ್ರರು ಪರಾರಿಯಾದ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಮಂಗಳವಾರ ಮೂವರು ಆರೋಪಿಗಳನ್ನು  ಬಂಧಿಸಿದ್ದಾರೆ.

ಮೂಲಗಳ ಪ್ರಕಾರ ಉಗ್ರರು ಪರಾರಿಯಾದ ಬಳಿಕ ವಜಾಗೊಂಡಿದ್ದ ಜೈಲಿನ ಉಪ ಅಧೀಕ್ಷಕ ಸೇರಿದಂತೆ ಇತರೆ ಇಬ್ಬರು ಆರೋಪಿಗಳನ್ನು ಪಂಜಾಬ್ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದ  ಬಳಿಕ ಈ ಮೂವರು ಪರಾರಿಯಾಗಿದ್ದು, ಇವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದರು ಎಂದು ತಿಳಿದುಬಂದಿದೆ. ಉಗ್ರರು ಪರಾರಿಯಾಗಲು ಕುಮ್ಮಕ್ಕು ನೀಡಿದ ಆರೋಪದ ಮೇಲೆ ಉಪ ಜೈಲು ಆಧೀಕ್ಷಕರನ್ನು ಬಂಧಿಸಲಾಗಿದ್ದು,  ಇಂತಹುದೇ ಆರೋಪ ಮತ್ತು ಉಗ್ರರಿಗೆ ನೆರವು ನೀಡಿದ ಆರೋಪದ ಮೇರೆಗೆ ಜೈಲಿನ ಸಮೀಪ ಸಿಹಿತಿನಿಸಿನ ಅಂಗಡಿ ಮಾಲೀಕನೋರ್ವನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಕರಣ ಸಂಬಂಧ ಪಂಜಾಬ್ ಪೊಲೀಸರು ಒಟ್ಟು 29 ಮಂದಿಯ ವಿರುದ್ಧ ಕೇಸ್ ದಾಖಲಿಸಿಕೊಂಡಿದ್ದು, ಜೈಲು ಉಪ ಅಧೀಕ್ಷಕ ಭೀಮ್ ಸಿಂಗ್, ಜೈಲು ವಾರ್ಡನ್ ಜಗ್ ಮೀತ್ ಸಿಂಗ್ ಹಾಗೂ ಸಿಹಿತಿನಿಸಿನ ಅಂಗಡಿ ಮಾಲೀಕ  ತೇಜಿಂದರ್ ಶರ್ಮಾ ಎಂಬುವವರನ್ನು ಬಂಧಿಸಿದ್ದಾರೆ. ಈ ಪೈಕಿ ಉಪ ಜೈಲು ಅಧೀಕ್ಷಕ ಭೀಮ್ ಸಿಂಗ್ ಜೈಲಿನಿಂದ ಉಗ್ರರು ಪರಾರಿಯಾಗುವ ಒಂದು ದಿನ ಮುಂಚಿತವಾಗಿ ಜೈಲಿನಲ್ಲಿ ಉಗ್ರರನ್ನು ಭೇಟಿ ಮಾಡಿದ್ದ. ಈತನದ್ದೇ  ಮೊಬೈಲ್ ನಿಂದ ಉಗ್ರರು ಯಾರಿಗೋ ಕರೆ ಮಾಡಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪರಾರಿಯಾದವರ ಪೈಕಿ ಮತ್ತಿಬ್ಬರ ಬಂಧನ
ಇದೇ ವೇಳೆ ನಭಾ ಜೈಲಿನಿಂದ ಪರಾರಿಯಾಗಿದ್ದ ಉಗ್ರರ ಪೈಕಿ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ರಾಜಸ್ತಾನದ ಗಂಗಾನಗರದಲ್ಲಿ ಅವಿತಿದ್ದ ಇಬ್ಬರು ಉಗ್ರರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ  ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT