ಗೋವಿಂದ್ ಪನ್ಸಾರೆ 
ದೇಶ

ಪನ್ಸಾರೆ ಕೊಲೆ ಪ್ರಕರಣ: ತಾವ್ಡೆ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಎಸ್ಐಟಿ

ಹಿರಿಯ ಸಿಪಿಐ ನಾಯಕ ಗೋವಿಂದ್ ಪನ್ಸಾರೆ ಕೊಲೆ ಪ್ರಕರಣ ಸಂಬಂಧ, ವಿಶೇಷ ತನಿಖಾ ತಂಡ ಸನಾತನ ಸಂಸ್ಥಾನ ಸದಸ್ಯ ವಿರೇಂದ್ರ...

ಪುಣೆ: ಹಿರಿಯ ಸಿಪಿಐ ನಾಯಕ ಗೋವಿಂದ್ ಪನ್ಸಾರೆ ಕೊಲೆ ಪ್ರಕರಣ ಸಂಬಂಧ, ವಿಶೇಷ ತನಿಖಾ ತಂಡ ಸನಾತನ ಸಂಸ್ಥಾನ ಸದಸ್ಯ ವಿರೇಂದ್ರ ತಾವ್ಡೆ ಅವರ ವಿರುದ್ಧ ಕೊಲ್ಲಾಪುರ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದೆ.
ಪ್ರಕರಣ ತನಿಖೆ ನಡೆಸುತ್ತಿರುವ ಎಸ್ ಐಟಿ ತಾವ್ಡೆ ವಿರುದ್ಧ ಸುಮಾರು 400 ಪುಟಗಳ ಹೆಚ್ಚುವರಿ ಚಾರ್ಜ್ ಶೀಟ್ ನ್ನು ಮಂಗಳವಾರ ದಾಖಲಿಸಿದೆ.
ಈ ಮುಂಚೆ ನರೇಂದ್ರ ದಾಬೋಳ್ಕರ್ ಕೊಲೆ ಪ್ರಕರಣ ಸಂಬಂಧ ತಾವ್ಡೆಯನ್ನು ಸಿಬಿಐ ಬಂಧಿಸಿತ್ತು. ಕಳೆದ ಸೆಪ್ಟೆಂಬರ್ ನಲ್ಲಿ ಗೋವಿಂದ್ ಪನ್ಸಾರೆ ಕೊಲೆ ಪ್ರಕರಣ ಸಂಬಂಧ ಕೊಲ್ಲಾಪುರ ಪೊಲೀಸರು ತಾವ್ಡೆಯನ್ನು ವಶಕ್ಕೆ ಪಡೆದಿದ್ದರು.
ಪನ್ಸಾರೆ ಕೊಲೆ ಪ್ರಕರಣದಲ್ಲಿ ತಾವ್ಡೆಯನ್ನು ಎರಡನೇ ಪ್ರಮುಖ ಆರೋಪಿಯನ್ನಾಗಿ ಮಾಡಲಾಗಿದೆ.
ನಾವು ತಾವ್ಡೆ ವಿರುದ್ಧ ಕೊಲ್ಲಾಪುರ ಕೋರ್ಟ್ ಗೆ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿದ್ದೇವೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಪ್ರಕರಣದ ತನಿಖಾಧಿಕಾರಿ ಸುಹೇಲ್ ಶರ್ಮಾ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT