ಪಾಕ್, ಬಾಂಗ್ಲಾ ಗಡಿ ಪ್ರದೇಶದಲ್ಲಿ ಶೀಘ್ರವೆ ಗಸ್ತು ಮುಕ್ತ ಸ್ಮಾರ್ಟ್ ಬೇಲಿ: ಬಿಎಸ್ ಎಫ್ 
ದೇಶ

ಪಾಕ್, ಬಾಂಗ್ಲಾ ಗಡಿ ಪ್ರದೇಶದಲ್ಲಿ ಶೀಘ್ರವೆ ಗಸ್ತು ಮುಕ್ತ ಸ್ಮಾರ್ಟ್ ಬೇಲಿ: ಬಿಎಸ್ ಎಫ್

ಪಾಕಿಸ್ತಾನ ಹಾಗೂ ಬಾಂಗ್ಲಾ ದೇಶಗಳಿಗೆ ಹೊಂದಿಕೊಂಡಿರುವ ಗಡಿ ಪ್ರದೇಶದಲ್ಲಿ 2017ರ ಅಂತ್ಯಕ್ಕೆ ಗಸ್ತು ಮುಕ್ತ ಸ್ಮಾರ್ಟ್ ಬೇಲಿ ನಿರ್ಮಾಣವಾಗಲಿದೆ ಎಂದು ಬಿಎಸ್ಎಫ್ ತಿಳಿಸಿದೆ.

ನವದೆಹಲಿ: ಪಾಕಿಸ್ತಾನ ಹಾಗೂ ಬಾಂಗ್ಲಾ ದೇಶಗಳಿಗೆ ಹೊಂದಿಕೊಂಡಿರುವ ಗಡಿ ಪ್ರದೇಶದಲ್ಲಿ 2017ರ ಅಂತ್ಯಕ್ಕೆ ಗಸ್ತು ಮುಕ್ತ ಸ್ಮಾರ್ಟ್ ಬೇಲಿ ನಿರ್ಮಾಣವಾಗಲಿದೆ ಎಂದು ಬಿಎಸ್ಎಫ್ ತಿಳಿಸಿದೆ. 
ಸ್ಮಾರ್ಟ್ ಬೇಲಿ ನಿರ್ಮಾಣಕ್ಕಾಗಿ ಈಗಾಗಲೇ ಜಾಗತಿಕ ಮಟ್ಟದ 20 ಕಂಪನಿಗಳು ತಾಂತ್ರಿಕ ಪರಿಶೀಲನೆ ನಡೆಸಿವೆ. ಕಾಂಪ್ರಹೆನ್ಸಿವ್ ಇಂಟಿಗ್ರೇಟೆಡ್ ಬಾರ್ಡರ್ ನಿರ್ವಹಣಾ ವ್ಯವಸ್ಥೆಗೆ ಕೇಂದ್ರ ಗೃಹ ಇಲಾಖೆ ಒಪ್ಪಿಗೆ ಸೂಚಿಸಿದ್ದು ಕಾಮಗಾರಿಗಳು ಜಾರಿಯ ಹಂತದಲ್ಲಿದೆ ಎಂದು ಬಿಎಸ್ಎಫ್ ನ ಪ್ರಧಾನ ನಿರ್ದೇಶಕ ಕೆಕೆ ಶರ್ಮಾ ಮಾಹಿತಿ ನೀಡಿದ್ದಾರೆ. 
ಗಡಿ ಭಾಗದಲ್ಲಿ ಸ್ಮಾರ್ಟ್ ಬೇಲಿ ನಿರ್ಮಾಣ ಮಾಡುವುದರಿಂದ ಯೋಧರು ಸಾಮಾನ್ಯವಾಗಿ ಈಗ ಗಸ್ತು ತಿರುಗುವ ಅಗತ್ಯತೆ ಕಡಿಮೆಯಾಗಲಿದ್ದು,  ಗ್ರಿಡ್ ಎಚ್ಚರಿಕೆ ನೀಡಲಿದ್ದು ಉಳಿದ ಗ್ರಿಡ್ ಗಳಿಗೂ ಮಾಹಿತಿ ರವಾನೆ ಮಾಡಲಿದ್ದು ನುಸುಳುವವರ ವಿರುದ್ಧ ದಾಳಿ ನಡೆಸಲು ಯೋಧರಿಗೆ ಮಾಹಿತಿ ಸಿಗಲಿದೆ.  
ಪ್ರಾಯೋಗಿಕವಾಗಿ ಜಮ್ಮು, ಪಂಜಾಬ್, ಗುಜರಾತ್ ನ ಸೂಕ್ಷ್ಮ ಪ್ರದೇಶದಲ್ಲಿ ಗಸ್ತು ರಹಿತ ಸ್ಮಾರ್ಟ್ ಬೇಲಿ ನಿರ್ಮಾಣ ಮಾದಲಾಗುತ್ತಿದೆ. ಪಠಾಣ್ ಕೋಟ್ ವಾಯು ನೆಲೆ ಮೇಲೆ ಭಯೋತ್ಪಾದಕರ ದಾಳಿ ನಡೆದಿದ್ದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಮಾಜಿ ಕೇಂದ್ರ ಗೃಹ ಕಾರ್ಯದರ್ಶಿ ಮಧುಕರ್ ಗುಪ್ತಾ ಅವರ ನೇತೃತ್ವದ ಸಮಿತಿ ರಚಿಸಿ, ಗಡಿಪ್ರದೇಶದ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಕೈಗೊಳ್ಳಬೇಕಿರುವ ಕ್ರಮಗಳಿಗೆ ಸಲಹೆ ನೀಡಲು ಸೂಚಿಸಿತ್ತು. ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ಗಡಿ ಪ್ರದೇಶಗಳಲ್ಲಿ ಅತ್ಯಂತ ಕಡಿಮೆ ಸಿಬ್ಬಂದಿಗಳನ್ನು ನಿಯೋಜಿಸುವುದು ಸಮಿತಿಯ ಶಿಫಾರಸ್ಸುಗಳಲ್ಲಿ ಒಂದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT