ಮಹಿಳೆಯರನ್ನು ತಡೆಯುತ್ತಿರುವ ಹಿಂದು ಸಂಘಟನೆ ಕಾರ್ಯಕರ್ತರು 
ದೇಶ

ಚೂಡಿದಾರ್ ಧರಿಸಿ ಅನಂತ ಪದ್ಮನಾಭ ದೇವಾಲಯಕ್ಕೆ ಬಂದ ಮಹಿಳೆಯರಿಗೆ ನಿರ್ಬಂಧ

ಚೂಡಿದಾರ್ ಧರಿಸಿ ಶ್ರೀ ಅನಂತ ಪದ್ಮನಾಭ ದೇವಾಲಯ ಪ್ರವೇಶಿಸಲು ಬಂದ ಮಹಿಳೆಯರನ್ನು ಹಿಂದು ಸಂಘಟನೆಗಳು ತಡೆದಿವೆ.

ತಿರುವನಂತಪುರ: ಚೂಡಿದಾರ್ ಧರಿಸಿ ಶ್ರೀ ಅನಂತ ಪದ್ಮನಾಭ ದೇವಾಲಯ ಪ್ರವೇಶಿಸಲು ಬಂದ ಮಹಿಳೆಯರನ್ನು ಹಿಂದು ಸಂಘಟನೆಗಳು ತಡೆದಿವೆ.

ಚೂಡಿದಾರ ಧರಿಸಿ ದೇವಾಸ್ಥಾನದ ಒಳಗೆ ಪ್ರವೇಶಿಸಲು ಮಹಿಳೆಯರು ಮುಂದಾದರು. ಈ ವೇಳೆ ಪೂರ್ವದ್ವಾರಕ್ಕೆ ಬಂದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಮಹಿಳೆಯರು ದೇವಾಲಯಕ್ಕೆ ಪ್ರವೇಶಿಸದಂತೆ ತಡೆದಿದ್ದಾರೆ.

ವಸ್ತ್ರ ಸಂಹಿತೆ ಸಡಿಲಗೊಳಿಸಿ ದೇವಾಲಯಕ್ಕೆ ಚೂಡಿದಾರ್ ಧರಿಸಿ ಬರಲು ಅವಕಾಶ ಇದೆ ಎಂದು ಮಂಗಳವಾರ ದೇವಾಲಯ ಕಾರ್ಯಕಾರಿ ಅಧಿಕಾರಿ ಕೆ.ಎನ್ ಸತೀಶ್ ಆದೇಶ ಹೊರಡಿಸಿದ್ದರು.

ಇದರಿಂದಾಗಿ ಇಂದು ಬೆಳಗ್ಗೆಯಿಂದಲೇ ಮಹಿಳಾ ಭಕ್ತಾದಿಗಳು ಚೂಡಿದಾರ ಧರಿಸಿ ಬಂದಿದ್ದರು. ಇದರಿಂದ ಕೆರಳಿದ ಹಿಂದು ಸಂಘಟನೆಗಳು ದೇವಾಸ್ಥಾನದ ಸಂಪ್ರದಾಯವನ್ನು ಉಲ್ಲಂಘಿಸುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯರ ಪ್ರವೇಶವನ್ನು ತಡೆದಿದ್ದಾರೆ.

ಮಹಿಳೆಯರು ಕಡ್ಡಾಯವಾಗಿ ಸೀರೆ ಹಾಗೂ ಪುರುಷರು ಧೋತಿ ಧರಿಸಬೇಕು ಎಂಬ ನಿಯಮವಿತ್ತು, ಆದರೆ ಈಗ ಮಹಿಳೆಯರು ಚೂಡಿದಾರ್ ಧರಿಸಲು ಅವಕಾಶ ಕಲ್ಪಿಸಿಕೊಡಲಾಗಿತ್ತು.

ತಿರುವನಂತಪುರದ ರಿಯಾ ರಾಜಿ ಎಂಬುವರು ಸಲ್ಲಿಸಿದ ಅರ್ಜಿಯ ಆಧಾರದ ಮೇಲೆ ವಸ್ತ್ರ ಸಂಹಿತೆ ನೀತಿ ಸಡಿಲಿಸಲಾಗಿದೆ ಎಂದು ದೇವಾಲಯ ಕಾರ್ಯಕಾರಿ ಅಧಿಕಾರಿ ಕೆ,ಎನ್ ಸತೀಶ್ ತಿಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT