ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ (ಸಂಗ್ರಹ ಚಿತ್ರ) 
ದೇಶ

ನೋಟು ನಿಷೇಧ: ಪ್ರಧಾನಿ ಮೋದಿ ನಿರ್ಧಾರ ಸ್ವಾಗತಿಸಿದ ದೇವೇಗೌಡ

ರು.500 ಹಾಗೂ 1,000 ನೋಟುಗಳ ಮೇಲೆ ನಿಷೇಧ ಹೇರಿರುವ ಕುರಿತಂತೆ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆಗಳನ್ನು ನಡೆಸುತ್ತಿರುವುದರ ಬೆನ್ನಲ್ಲೇ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ...

ನವದೆಹಲಿ: ರು.500 ಹಾಗೂ 1,000 ನೋಟುಗಳ ಮೇಲೆ ನಿಷೇಧ ಹೇರಿರುವ ಕುರಿತಂತೆ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆಗಳನ್ನು ನಡೆಸುತ್ತಿರುವುದರ ಬೆನ್ನಲ್ಲೇ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬೆನ್ನಿಗೆ ನಿಂತಿದ್ದು, ಮೋದಿಯವರ ನಿರ್ಧಾರ ಸ್ವಾಗತಾರ್ಹ ಎಂದು ಗುರುವಾರ ಹೇಳಿದ್ದಾರೆ.

ನೋಟು ನಿಷೇಧ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, 1970ರಲ್ಲಿ ಮೊರಾರ್ಜಿ ದೇಸಾಯಿ ಅವರು ಹಣಕಾಸು ಸಚಿವರಾಗಿದ್ದಾಗಲೂ ಈ ರೀತಿಯ ನಿರ್ಧಾರವನ್ನು ಕೈಗೊಂಡಿದ್ದರು. ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ಇಂತಹದ್ದೊಂದು ನಿರ್ಧಾರವನ್ನು ಕೈಗೊಂಡಿದ್ದಾರೆ. ನೋಟು ನಿಷೇಧ ಕುರಿತಂತೆ ಯಾವುದೇ ಪಕ್ಷಪಾತವನ್ನು ಮಾಡುವುದಿಲ್ಲ. ಮೋದಿಯವರ ನಿರ್ಧಾರ ಸ್ವಾಗತಾರ್ಹ ಎಂದು ಹೇಳಿದ್ದಾರೆ.

ಇದೇ ವೇಳೆ ಸಂಸತ್ತಿನಲ್ಲಿ ವಿರೋಧ ಪಕ್ಷಗಳು ನೋಟು ನಿಷೇಧ ಕುರಿತಂತೆ ಗದ್ದಲವನ್ನುಂಟು ಮಾಡುತ್ತಿರುವುದರ ಬಗ್ಗೆ ಮಾತನಾಡಿರುವ ಅವರು, ನೋಟು ನಿಷೇಧ ಮಾಡುವುದಕ್ಕೂ ಮೊದಲು ಕೇಂದ್ರ ಪೂರ್ವ ತಯಾರಿಯನ್ನು ಮಾಡಿಕೊಂಡಿಲ್ಲ. ಕೇಂದ್ರದ ಈ ನಡೆಯಿಂದ ಸಾಮಾನ್ಯ ಜನರು ಸಮಸ್ಯೆ ಎದುರಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಪರಿಸ್ಥಿತಿ ಹೀಗಿರುವಾಗ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುವುದು ಸಾಮಾನ್ಯವಾಗಿಯೇ ಇರುತ್ತೆದ ಎಂದು ತಿಳಿಸಿದ್ದಾರೆ.

ನೋಟಿನ ಮೇಲಿನ ನಿಷೇಧ ನಿರ್ಧಾರನ್ನು ದಿಢೀರನೇ ತೆಗೆದುಕೊಳ್ಳಲಾಗಿದೆ. ಕೇಂದ್ರ ಈ ನಿರ್ಧಾರ ನಗರದ ಜನರ ಮೇಲಷ್ಟೇ ಅಲ್ಲದೆ, ಗ್ರಾಮೀಣ ಪ್ರದೇಶದ ಜನರ ಮೇಲೆ ಗಂಭೀರವಾಗ ಪರಿಣಾವನ್ನು ಬೀರಿದೆ. ರು.500 ಹಾಗೂ 1,000 ನೋಟುಗಳ ನಿಷೇಧದಿಂದಾಗಿ ರೈತರು ಹಾಗೂ ಹಾಲು ವ್ಯಾಪಾರಿಗಳಿಗೆ ಸರಿಯಾದ ಸಮಯಕ್ಕೆ ಹಣ ಸಿಗುತ್ತಿಲ್ಲ. ಬ್ಯಾಂಕುಗಳು ಹಾಗೂ ಎಟಿಎಂಗಳ ಎದುರು ಕ್ಯೂನಿಂತು ಜನರೂ ಪ್ರತಿನಿತ್ಯ ಸಮಸ್ಯೆ ಎದುರಿಸುತ್ತಿದ್ದಾರೆ.

ನೋಟು ನಿಷೇಧ ನಿರ್ಧಾರದಲ್ಲಿ ನಾನು ಯಾವುದೇ ಪಕ್ಷಪಾತವನ್ನು ಮಾಡುವುದಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಈ ನಿರ್ಧಾರವನ್ನು ಸ್ವಾಗತಿಸುತ್ತೇನೆಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT