ಕೇಂದ್ರ ಸಚಿವ ಮನೋಹರ್ ಪರಿಕ್ಕರ್ (ಸಂಗ್ರಹ ಚಿತ್ರ) 
ದೇಶ

ಪಾಕ್ ವಶದಲ್ಲಿರುವ ಯೋಧನ ವಾಪಸ್ ಕರೆತರಲು ಸಕಲ ಪ್ರಯತ್ನ: ಮನೋಹರ್ ಪರಿಕ್ಕರ್

ಪಾಕಿಸ್ತಾನ ಸೇನೆ ವಶದಲ್ಲಿರುವ ಭಾರತೀಯ ಯೋಧನನ್ನು ಸುರಕ್ಷಿತವಾಗಿ ಕರೆತರಲು ಸಕಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಹೇಳಿದ್ದಾರೆ.

ನವದೆಹಲಿ: ಪಾಕಿಸ್ತಾನ ಸೇನೆ ವಶದಲ್ಲಿರುವ ಭಾರತೀಯ ಯೋಧನನ್ನು ಸುರಕ್ಷಿತವಾಗಿ ಕರೆತರಲು ಸಕಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್  ಪರಿಕ್ಕರ್ ಅವರು ಹೇಳಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪರಿಕ್ಕರ್ ಅವರು, ಪ್ರಸ್ತುತ ಉಭಯ ದೇಶಗಳ ನಡುವೆ ಬಿಗುವಿನ ವಾತಾವರಣವಿದೆ. ಹೀಗಾಗಿ ಯೋಧನನ್ನು ವಾಪಸ್ ಕರೆತರಲು ಮತ್ತಷ್ಟು  ದಿನ ಕಾಯಬೇಕಾಗುತ್ತದೆ ಎಂದು ಹೇಳಿದ್ದಾರೆ. "ಡಿಜಿಎಂಒ ಮೂಲಕ ಯೋಧನನ್ನು ದೇಶಕ್ಕೆ ವಾಪಸ್ ಕರೆತರುವ ಕುರಿತು ಈಗಾಗಲೇ ಪ್ರಯತ್ನಗಳನ್ನು ಆರಂಭಿಸಲಾಗಿದೆ. ಇಂತಹ ಕೆಲಸಗಳಿಗೆ  ತನ್ನದೇ ಪ್ರಕ್ರಿಯೆಗಳಿದ್ದು, ಅದೇ ವ್ಯವಸ್ಥೆ ಮೂಲಕ ನಾವು ಮುಂದುವರೆಯಬೇಕಾಗುತ್ತದೆ. ಉದ್ದೇಶಪೂರ್ವಕವಲ್ಲದೇ ಅಥವಾ ಅಚಾತುರ್ಯವಾಗಿ ಗಡಿ ದಾಟಿ ಬಂಧಿತರಾಗಿರುವ ಯೋಧರನ್ನು  ಗುರುತಿಸಿ ಪರಸ್ಪರ ವಿನಿಮಯ ಮಾಡಿಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಇದೇ ವೇಳೆ ಗಡಿಯಲ್ಲಿ ಘೋಷಣೆಯಾಗಿರುವ ಹೈಅಲರ್ಟ್ ಕುರಿತಂತೆ ಮಾತನಾಡಿದ ಪರಿಕ್ಕರ್ ಅವರು, ಗಡಿಯಲ್ಲಿ ಯಾವುದೇ ರೀತಿಯ ಸಂಶಯಾಸ್ಪದ ಘಟನೆಗಳು ನಡೆದರೆ ಅದನ್ನೂ  ಕೂಡಲೇ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಗಡಿ ಭಾಗದ ಗ್ರಾಮಸ್ಥರಿಗೆ ಪರಿಕ್ಕರ್ ಮನವಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT