ಕೇಂದ್ರ ಸಚಿವ ಮನೋಹರ್ ಪರಿಕ್ಕರ್ (ಸಂಗ್ರಹ ಚಿತ್ರ) 
ದೇಶ

ಪಾಕ್ ವಶದಲ್ಲಿರುವ ಯೋಧನ ವಾಪಸ್ ಕರೆತರಲು ಸಕಲ ಪ್ರಯತ್ನ: ಮನೋಹರ್ ಪರಿಕ್ಕರ್

ಪಾಕಿಸ್ತಾನ ಸೇನೆ ವಶದಲ್ಲಿರುವ ಭಾರತೀಯ ಯೋಧನನ್ನು ಸುರಕ್ಷಿತವಾಗಿ ಕರೆತರಲು ಸಕಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಹೇಳಿದ್ದಾರೆ.

ನವದೆಹಲಿ: ಪಾಕಿಸ್ತಾನ ಸೇನೆ ವಶದಲ್ಲಿರುವ ಭಾರತೀಯ ಯೋಧನನ್ನು ಸುರಕ್ಷಿತವಾಗಿ ಕರೆತರಲು ಸಕಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್  ಪರಿಕ್ಕರ್ ಅವರು ಹೇಳಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪರಿಕ್ಕರ್ ಅವರು, ಪ್ರಸ್ತುತ ಉಭಯ ದೇಶಗಳ ನಡುವೆ ಬಿಗುವಿನ ವಾತಾವರಣವಿದೆ. ಹೀಗಾಗಿ ಯೋಧನನ್ನು ವಾಪಸ್ ಕರೆತರಲು ಮತ್ತಷ್ಟು  ದಿನ ಕಾಯಬೇಕಾಗುತ್ತದೆ ಎಂದು ಹೇಳಿದ್ದಾರೆ. "ಡಿಜಿಎಂಒ ಮೂಲಕ ಯೋಧನನ್ನು ದೇಶಕ್ಕೆ ವಾಪಸ್ ಕರೆತರುವ ಕುರಿತು ಈಗಾಗಲೇ ಪ್ರಯತ್ನಗಳನ್ನು ಆರಂಭಿಸಲಾಗಿದೆ. ಇಂತಹ ಕೆಲಸಗಳಿಗೆ  ತನ್ನದೇ ಪ್ರಕ್ರಿಯೆಗಳಿದ್ದು, ಅದೇ ವ್ಯವಸ್ಥೆ ಮೂಲಕ ನಾವು ಮುಂದುವರೆಯಬೇಕಾಗುತ್ತದೆ. ಉದ್ದೇಶಪೂರ್ವಕವಲ್ಲದೇ ಅಥವಾ ಅಚಾತುರ್ಯವಾಗಿ ಗಡಿ ದಾಟಿ ಬಂಧಿತರಾಗಿರುವ ಯೋಧರನ್ನು  ಗುರುತಿಸಿ ಪರಸ್ಪರ ವಿನಿಮಯ ಮಾಡಿಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಇದೇ ವೇಳೆ ಗಡಿಯಲ್ಲಿ ಘೋಷಣೆಯಾಗಿರುವ ಹೈಅಲರ್ಟ್ ಕುರಿತಂತೆ ಮಾತನಾಡಿದ ಪರಿಕ್ಕರ್ ಅವರು, ಗಡಿಯಲ್ಲಿ ಯಾವುದೇ ರೀತಿಯ ಸಂಶಯಾಸ್ಪದ ಘಟನೆಗಳು ನಡೆದರೆ ಅದನ್ನೂ  ಕೂಡಲೇ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಗಡಿ ಭಾಗದ ಗ್ರಾಮಸ್ಥರಿಗೆ ಪರಿಕ್ಕರ್ ಮನವಿ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! Video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

SCROLL FOR NEXT