ಬಲೂನ್'ನಲ್ಲಿ ಬೆದರಿಕೆ ಸಂದೇಶ ಕಳುಹಿಸಿದ ಪಾಕ್ 
ದೇಶ

ಪ್ರಧಾನಿ ಮೋದಿಗೆ ಬೆದರಿಕೆ: ಬಲೂನ್'ನಲ್ಲಿ ಬೆದರಿಕೆ ಸಂದೇಶ ಕಳುಹಿಸಿದ ಪಾಕ್

ಭಾರತೀಯ ಸೇನೆಗೆ ಸೀಮಿತ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಸತತ ಯತ್ನ ನಡೆಸುತ್ತಿರುವ ಪಾಕಿಸ್ತಾನ, ಬಲೂನ್ ಮೂಲಕ ಇದೀಗ ಬೆದರಿಕೆ ಸಂದೇಶವೊಂದನ್ನು ರವಾನಿಸಿದೆ...

ಗುರುದಾಸ್ಪುರ: ಭಾರತೀಯ ಸೇನೆಗೆ ಸೀಮಿತ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಸತತ ಯತ್ನ ನಡೆಸುತ್ತಿರುವ ಪಾಕಿಸ್ತಾನ, ಬಲೂನ್ ಮೂಲಕ ಇದೀಗ ಬೆದರಿಕೆ ಸಂದೇಶವೊಂದನ್ನು ರವಾನಿಸಿದೆ.

ಉರ್ದು ಭಾಷೆಯಲ್ಲಿ ಸಂದೇಶ ಬರೆದಿರುವ ಬಲೂನ್ ಗಳು ದೀನಾನಗರದಲ್ಲಿ ದೊರಕಿದ್ದು, ಪ್ರಧಾನಿ ಮೋದಿಯವರಿಗೆ ಬೆದರಿಕೆಯೊಡ್ಡಲಾಗಿದೆ ಎಂದು ತಿಳಿದುಬಂದಿದೆ.

ಬೆದರಿಕೆ ಸಂದೇಶ ಬರೆದಿರುವ ಎರಡು ಬಲೂನ್ ಗಳು ದೊರಕಿದ್ದು, ಒಂದು ಬಲೂನ್ ಮೇಲೆ ಪಾಕಿಸ್ತಾನ ಸೇನಾ ಬಲವನ್ನು ಪರಿಶೀಲಿಸಲು ನಿಮಗೆಷ್ಟು ಧೈರ್ಯ...ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಿಯೇ ತೀರುತ್ತೇವೆಂದು ಬರೆದಿದೆ, ಮತ್ತೊಂದು ಬಲೂನ್ ಮೇಲೆ ಪ್ರಧಾನಿ ಮೋದಿಯವರಿಗೆ ಬೆದರಿಕೆಯೊಡ್ಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮೋದಿ ಸುನ್ ಲೇ...ಅಯೂಬಿ ಕಿ ತಲ್ವಾರ್ ಅಭಿ ಹಮಾರೆ ಪಾಸ್ ಹೈ..ಇಸ್ಲಾಂ ಜಿಂದಾಬಾದ್ ಎಂದು ಬರೆಯಲಾಗಿದೆ.

ಬಲೂನ್ ಗಳು ಶುಕ್ರವಾರ ಸಂಜೆ ಸುಮಾರಿಗೆ ಸ್ಥಳೀಯರ ಕೈಗೆ ಸಿಕ್ಕಿದ್ದು, ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದರಂತೆ ಸ್ಥಳಕ್ಕೆ ಬಂದ ಪೊಲೀಸರು ಬಲೂನ್ ಗಳನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದ್ದಾರೆ.

ಬೆದರಿಕೆ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರು ಗಡಿಯಲ್ಲಿರುವ ಗುರುದಾಸ್ಪುರ, ಪಠಾಣ್ ಕೋಟ್ ಜಿಲ್ಲೆಗಳಿಗೆ ಭೇಟಿ ನೀಡಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT