ಬಾಲಿವುಡ್ ನಟರಾದ ಶಾರೂಕ್ ಖಾನ್, ಸಲ್ಮಾನ್ ಖಾನ್ ಮತ್ತು ವಿಎಚ್ ಪಿ ನಾಯಕಿ ಸಾದ್ವಿ ಪ್ರಾಚಿ(ಸಂಗ್ರಹ ಚಿತ್ರ) 
ದೇಶ

ಬಾಲಿವುಡ್ ಸೂಪರ್ ಸ್ಟಾರ್ ಗಳು ಪಾಕಿಸ್ತಾನಕ್ಕೆ ಹೋಗಬೇಕು: ಸಾದ್ವಿ ಪ್ರಾಚಿ

ಬಾಲಿವುಡ್ ನಲ್ಲಿ ಕೆಲಸ ಮಾಡುತ್ತಿರುವ ಪಾಕಿಸ್ತಾನ ಕಲಾವಿದರ ಮೇಲೆ ಹೊಸದಾಗಿ ವಾಗ್ದಾಳಿ ನಡೆಸಿದ ವಿಎಚ್ ಪಿ ನಾಯಕಿ

ಜಬಲ್ಪುರ: ಬಾಲಿವುಡ್ ನಲ್ಲಿ ಕೆಲಸ ಮಾಡುತ್ತಿರುವ ಪಾಕಿಸ್ತಾನ ಕಲಾವಿದರ ಮೇಲೆ ಹೊಸದಾಗಿ ವಾಗ್ದಾಳಿ ನಡೆಸಿದ ವಿಎಚ್ ಪಿ ನಾಯಕಿ ಸಾದ್ವಿ ಪ್ರಾಚಿ, ಅವರು ಅವರ ದೇಶದಲ್ಲಿಯೇ ತಮ್ಮ ಪ್ರತಿಭೆಯನ್ನು ತೋರಿಸಬೇಕು. ಅಲ್ಲಿನ ಕಲಾವಿದರಿಗೆ ಮನ್ನಣೆ ತೋರುವ ಬಾಲಿವುಡ್ ನ ಕಲಾವಿದರಾದ ಸಲ್ಮಾನ್ ಖಾನ್, ಶಾರೂಕ್ ಖಾನ್, ಅಮೀರ್ ಖಾನ್ ಮೊದಲಾದವರು ಪಾಕಿಸ್ತಾನಕ್ಕೆ ಹೋಗಬೇಕು ಎಂದು ಹೇಳಿದ್ದಾರೆ.
ಪಾಕಿಸ್ತಾನ ಕಲಾದರಿಗೆ ಭಾರತದಲ್ಲಿ ನಿಷೇಧ ಹೇರಿರುವ ಕುರಿತಂತೆ ಪ್ರತಿಕ್ರಿಯೆ ನೀಡಿದ್ದ ಸಲ್ಮಾನ್ ಖಾನ್, ಅವರು ಕಲಾವಿದರೇ ಹೊರತು ಭಯೋತ್ಪಾದಕರಲ್ಲ ಎಂದು ಹೇಳಿದ್ದರು. 
ನೆರೆ ರಾಷ್ಟ್ರಗಳೊಂದಿಗೆ ಶಾಂತಿ, ಸೌಹಾರ್ದತೆಯಿಂದ ಇರಬೇಕು ಎಂದು ಒಪ್ಪಿಕೊಂಡಿರುವ ಸಾದ್ವಿ ಪ್ರಾಚಿ, ರಾಕ್ಷಸ ಪ್ರವೃತ್ತಿಯ ನೆರೆ ರಾಷ್ಟ್ರಗಳಿಗೆ ಪಾಠ ಕಲಿಸಬೇಕಾದುದೂ ಕೂಡ ಮುಖ್ಯವಾಗಿದೆ ಎಂದಿದ್ದಾರೆ.
ಭಾರತ-ಪಾಕಿಸ್ತಾನ ಇಬ್ಭಾಗಕ್ಕೆ ಮತ್ತು ಕಾಶ್ಮೀರ ವಿವಾದಕ್ಕೆ ಮಹಾತ್ಮಾ ಗಾಂಧಿಯವರು ಕಾರಣ ಎಂದು ಹೇಳಿದ ಸಾದ್ವಿ, ತಮಗೆ ಮಹಾತ್ಮಾ ಗಾಂಧಿ ಯಾವತ್ತಿಗೂ ಆದರ್ಶವಲ್ಲ, ಅವರನ್ನು ಗುಂಡಿಕ್ಕಿ ಸಾಯಿಸಿದ ನಾಥೂರಾಮ್ ಗೋಡ್ಸೆಯವರಿಗೆ ನಾನು ವಂದಿಸುತ್ತೇನೆ, ಅವರನ್ನು ಗೌರವಿಸುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

SCROLL FOR NEXT