ದಕ್ಷಿಣ ಭಾರತದಲ್ಲಿ ಇಸೀಸ್ ಮಾದರಿಯ ಉಗ್ರದಾಳಿಗೆ ಸಂಚು: ಶಂಕಿತ ಭಯೋತ್ಪಾದಕರ ಬಂಧನ 
ದೇಶ

ದಕ್ಷಿಣ ಭಾರತದಲ್ಲಿ ಇಸೀಸ್ ಮಾದರಿಯ ಉಗ್ರದಾಳಿಗೆ ಸಂಚು: ಶಂಕಿತ ಭಯೋತ್ಪಾದಕರ ಬಂಧನ

ಇಸೀಸ್ ಉಗ್ರದಾಳಿಯ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪದಡಿ, ಎನ್ಐಎ ಅಧಿಕಾರಿಗಳು ಕೇರಳ, ತಮಿಳುನಾಡಿನಲ್ಲಿ 6 ಜನರನ್ನು ಬಂಧಿಸಿದ್ದಾರೆ.

ನವದೆಹಲಿ: ಇಸೀಸ್ ಉಗ್ರದಾಳಿಯ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ  ಆರೋಪದಡಿ, ಎನ್ಐಎ ಅಧಿಕಾರಿಗಳು ಕೇರಳ, ತಮಿಳುನಾಡಿನಲ್ಲಿ 6 ಜನರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಒಮರ್ ಅಲಿಯಾಸ್ ಮುನ್ಸೀದ್ (30) ಅಬು ಬಶೀರ್(29) ಮಹಮ್ಮದ್ ಯೂಸುಫ್(26) ಜಸೀಮ್ ಎನ್ ಕೆ(25) ಸಫ್ವನ್(30) ಹಾಗು ಅಮ್ಮು(24) ಎಂದು ಗುರುತಿಸಲಾಗಿದೆ. ಕೇರಳದ ಕಣ್ಣೂರು ಹಾಗೂ ಕೋಯಿಕ್ಕೋಡ್ ನಲ್ಲಿ ಶಂಕಿತ ಭಯೋತ್ಪಾದಕರನ್ನು ಬಂಧಿಸಲಾಗಿದೆ.

ಬಂಧಿತ ಶಂಕಿತ ಭಯೋತ್ಪಾದಕರು ರಹಸ್ಯ ಸಭೆ ನಡೆಸಿ, ದಕ್ಷಿಣ ಭಾರತದ ಪ್ರಮುಖ ವ್ಯಕ್ತಿಗಳು,  ಪ್ರಮುಖ ಸ್ಥಳಗಳ ಮೇಲೆ ದಾಳಿ ನಡೆಸಲು ಯೋಜನೆ ರೂಪಿಸಿದ್ದರು ಎಂದು ಎನ್ಐಎ ಅಧಿಕಾರಿಗಳು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಂಕಿತ ಭಯೋತ್ಪಾದಕರಿಂದ ಸ್ಫೋಟಕ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT