ದಕ್ಷಿಣ ಭಾರತದಲ್ಲಿ ಇಸೀಸ್ ಮಾದರಿಯ ಉಗ್ರದಾಳಿಗೆ ಸಂಚು: ಶಂಕಿತ ಭಯೋತ್ಪಾದಕರ ಬಂಧನ 
ದೇಶ

ದಕ್ಷಿಣ ಭಾರತದಲ್ಲಿ ಇಸೀಸ್ ಮಾದರಿಯ ಉಗ್ರದಾಳಿಗೆ ಸಂಚು: ಶಂಕಿತ ಭಯೋತ್ಪಾದಕರ ಬಂಧನ

ಇಸೀಸ್ ಉಗ್ರದಾಳಿಯ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪದಡಿ, ಎನ್ಐಎ ಅಧಿಕಾರಿಗಳು ಕೇರಳ, ತಮಿಳುನಾಡಿನಲ್ಲಿ 6 ಜನರನ್ನು ಬಂಧಿಸಿದ್ದಾರೆ.

ನವದೆಹಲಿ: ಇಸೀಸ್ ಉಗ್ರದಾಳಿಯ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ  ಆರೋಪದಡಿ, ಎನ್ಐಎ ಅಧಿಕಾರಿಗಳು ಕೇರಳ, ತಮಿಳುನಾಡಿನಲ್ಲಿ 6 ಜನರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಒಮರ್ ಅಲಿಯಾಸ್ ಮುನ್ಸೀದ್ (30) ಅಬು ಬಶೀರ್(29) ಮಹಮ್ಮದ್ ಯೂಸುಫ್(26) ಜಸೀಮ್ ಎನ್ ಕೆ(25) ಸಫ್ವನ್(30) ಹಾಗು ಅಮ್ಮು(24) ಎಂದು ಗುರುತಿಸಲಾಗಿದೆ. ಕೇರಳದ ಕಣ್ಣೂರು ಹಾಗೂ ಕೋಯಿಕ್ಕೋಡ್ ನಲ್ಲಿ ಶಂಕಿತ ಭಯೋತ್ಪಾದಕರನ್ನು ಬಂಧಿಸಲಾಗಿದೆ.

ಬಂಧಿತ ಶಂಕಿತ ಭಯೋತ್ಪಾದಕರು ರಹಸ್ಯ ಸಭೆ ನಡೆಸಿ, ದಕ್ಷಿಣ ಭಾರತದ ಪ್ರಮುಖ ವ್ಯಕ್ತಿಗಳು,  ಪ್ರಮುಖ ಸ್ಥಳಗಳ ಮೇಲೆ ದಾಳಿ ನಡೆಸಲು ಯೋಜನೆ ರೂಪಿಸಿದ್ದರು ಎಂದು ಎನ್ಐಎ ಅಧಿಕಾರಿಗಳು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಂಕಿತ ಭಯೋತ್ಪಾದಕರಿಂದ ಸ್ಫೋಟಕ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ತೀವ್ರ ಧ್ರುವೀಕರಣಗೊಂಡ ಜಗತ್ತು, ಪಶ್ಚಿಮ ಏಷ್ಯಾ ಸಂಘರ್ಷದ ನಡುವೆಯೂ ಬ್ರಿಕ್ಸ್ ಶೃಂಗಸಭೆ ಯಶಸ್ವಿ-ಎಸ್ ಜೈಶಂಕರ್

ಬೆಳಗಾವಿ: ಬೈಕ್- ಸಾರಿಗೆ ಬಸ್ ನಡುವೆ ಅಪಘಾತ: ಮೂವರು ಸ್ಥಳದಲ್ಲೇ ಸಾವು!

ಸಮುದ್ರ ಅಡ್ಡವಿರದಿದ್ದರೆ ನೆಹರೂ- ಗಾಂಧಿ ಕುಟುಂಬ ಅರಬ್‌ ದೇಶಗಳಲ್ಲೂ ಚುನಾವಣೆಗೆ ನಿಲ್ತಿತ್ತು: ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್!

ಬೆಳಗಾವಿಯಲ್ಲಿ ಭೀಕರ ಅಗ್ನಿ ಅವಘಡ: ಫ್ರಿಡ್ಜ್ ಸ್ಪೋಟಗೊಂಡು ಒಂದೇ ಕುಟುಂಬದ ನಾಲ್ವರು ಸಜೀವ ದಹನ

KPSC ರದ್ದತಿಗೆ ಈಶ್ವರ್ ಖಂಡ್ರೆ ಪಟ್ಟು; UPSC ಮಾದರಿ ತನ್ನಿ ಎಂದು ಸಿಎಂಗೆ ಗ್ರಾಮೀಣಾಭಿವೃದ್ಧಿ ಸಚಿವ ಮನವಿ