ದಕ್ಷಿಣ ಭಾರತದಲ್ಲಿ ಇಸೀಸ್ ಮಾದರಿಯ ಉಗ್ರದಾಳಿಗೆ ಸಂಚು: ಶಂಕಿತ ಭಯೋತ್ಪಾದಕರ ಬಂಧನ 
ದೇಶ

ದಕ್ಷಿಣ ಭಾರತದಲ್ಲಿ ಇಸೀಸ್ ಮಾದರಿಯ ಉಗ್ರದಾಳಿಗೆ ಸಂಚು: ಶಂಕಿತ ಭಯೋತ್ಪಾದಕರ ಬಂಧನ

ಇಸೀಸ್ ಉಗ್ರದಾಳಿಯ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪದಡಿ, ಎನ್ಐಎ ಅಧಿಕಾರಿಗಳು ಕೇರಳ, ತಮಿಳುನಾಡಿನಲ್ಲಿ 6 ಜನರನ್ನು ಬಂಧಿಸಿದ್ದಾರೆ.

ನವದೆಹಲಿ: ಇಸೀಸ್ ಉಗ್ರದಾಳಿಯ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ  ಆರೋಪದಡಿ, ಎನ್ಐಎ ಅಧಿಕಾರಿಗಳು ಕೇರಳ, ತಮಿಳುನಾಡಿನಲ್ಲಿ 6 ಜನರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಒಮರ್ ಅಲಿಯಾಸ್ ಮುನ್ಸೀದ್ (30) ಅಬು ಬಶೀರ್(29) ಮಹಮ್ಮದ್ ಯೂಸುಫ್(26) ಜಸೀಮ್ ಎನ್ ಕೆ(25) ಸಫ್ವನ್(30) ಹಾಗು ಅಮ್ಮು(24) ಎಂದು ಗುರುತಿಸಲಾಗಿದೆ. ಕೇರಳದ ಕಣ್ಣೂರು ಹಾಗೂ ಕೋಯಿಕ್ಕೋಡ್ ನಲ್ಲಿ ಶಂಕಿತ ಭಯೋತ್ಪಾದಕರನ್ನು ಬಂಧಿಸಲಾಗಿದೆ.

ಬಂಧಿತ ಶಂಕಿತ ಭಯೋತ್ಪಾದಕರು ರಹಸ್ಯ ಸಭೆ ನಡೆಸಿ, ದಕ್ಷಿಣ ಭಾರತದ ಪ್ರಮುಖ ವ್ಯಕ್ತಿಗಳು,  ಪ್ರಮುಖ ಸ್ಥಳಗಳ ಮೇಲೆ ದಾಳಿ ನಡೆಸಲು ಯೋಜನೆ ರೂಪಿಸಿದ್ದರು ಎಂದು ಎನ್ಐಎ ಅಧಿಕಾರಿಗಳು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಂಕಿತ ಭಯೋತ್ಪಾದಕರಿಂದ ಸ್ಫೋಟಕ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT