ದೇಶ

ಪಿಒಕೆಯಲ್ಲಿ ಸೀಮಿತ ದಾಳಿ: ಮನೋಹರ್ ಪರಿಕ್ಕರ್ ಗೆ ಸನ್ಮಾನ ಮಾಡುವುದಕ್ಕೆ ಕಾಂಗ್ರೆಸ್ ವಿರೋಧ

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸೇನಾ ಪಡೆ ನಡೆಸಿದ್ದ ಸೀಮಿತ ದಾಳಿ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಗೆ ಸನ್ಮಾನ ಮಾಡುತ್ತಿರುವ ಬಿಜೆಪಿ ಕ್ರಮವನ್ನು ಗೋವಾ ಕಾಂಗ್ರೆಸ್ ಕಟುವಾಗಿ ಟೀಕಿಸಿದೆ.

ಪಣಜಿ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸೇನಾ ಪಡೆ ನಡೆಸಿದ್ದ ಸೀಮಿತ ದಾಳಿ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಗೆ ಸನ್ಮಾನ ಮಾಡುತ್ತಿರುವ ಬಿಜೆಪಿ ಕ್ರಮವನ್ನು ಗೋವಾ ಕಾಂಗ್ರೆಸ್ ಕಟುವಾಗಿ ಟೀಕಿಸಿದೆ.

ಸೇನಾಪಡೆ ಕಾರ್ಯಾಚರಣೆಯನ್ನು ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸುತ್ತಿದೆ ಎಂದು ಗೋವಾ ಕಾಂಗ್ರೆಸ್ ಪಕ್ಷದ ವಕ್ತಾರ ಸುನಿಲ್ ಕಾವಾಥನ್ಕರ್ ಆರೋಪಿಸಿದ್ದಾರೆ. ಪಿಒಕೆಯಲ್ಲಿ ಸೀಮಿತ ದಾಳಿ ನಡೆಸಿರುವ ಭಾರತ ಸೇನೆಗೆ ಉತ್ತೇಜನ ನೀಡುವ ಅಗತ್ಯವಿದೆ ಎಂದು ಕಾಂಗ್ರೆಸ್ ಪಕ್ಷದ ವಕ್ತಾರ ಹೇಳಿದ್ದಾರೆ.

ಮನೋಹರ್ ಪರಿಕ್ಕರ್ ಒಂದು ವೇಳೆ ಸನ್ಮಾನವನ್ನು ಸ್ವೀಕರಿಸುವುದೇ ಆದರೆ, ಬಾರಾಮುಲ್ಲಾದಲ್ಲಿ ಉಗ್ರದಾಳಿ ನಡೆದ ಹಿನ್ನೆಲೆಯಲ್ಲಿ ಮನೋಹರ್ ಪರಿಕ್ಕರ್ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಭಾರತೀಯ ಸೇನೆ ದಾಳಿ ನಡೆಸಿ ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರವನ್ನು ಶ್ಲಾಘಿಸಿದ್ದೇವೆ, ಆದರೆ ಬಿಜೆಪಿ ಸೇನಾ ದಾಳಿಯನ್ನು ರಾಜಕೀಯವಾಗಿ ಬಳಕೆ ಮಾಡಿಕೊಳ್ಳುತ್ತಿದೆ, ಬಾರಾಮುಲ್ಲಾದಲ್ಲಿ ಸೇನಾ ಕ್ಯಾಂಪ್ ಮೇಲೆ ದಾಳಿ ನಡೆದಿರುವ ಹಿನ್ನೆಲೆಯಲ್ಲಿ ಬಿಜೆಪಿಯೇಕೆ ಮನೋಹರ್ ಪರಿಕ್ಕರ್ ಅವರ ರಾಜಿನಾಮೆಗೆ ಆಗ್ರಹಿಸುತ್ತಿಲ್ಲ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

Ganesh Chaturthi ಎಫೆಕ್ಟ್; ಮತ್ತೆ ಗಗನದತ್ತ ಮುಖ ಮಾಡಿದ ಚಿನ್ನದ ಬೆಲೆ, ಇಂದಿನ ದರ ಪಟ್ಟಿ ಇಂತಿದೆ!

ಕೊಹಿಮಾ, ವಿಶಾಖಪಟ್ಟಣಂ, ಭುವನೇಶ್ವರ ಮಹಿಳೆಯರಿಗೆ ಸುರಕ್ಷಿತ ನಗರ; ಪಾಟ್ನಾ, ಜೈಪುರ ಅಸುರಕ್ಷಿತ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

SCROLL FOR NEXT