ಸ್ವರಾಜ್ ಇಂಡಿಯಾ ಪಕ್ಷ ಸ್ಥಾಪಿಸಿದ ಯೋಗೇಂದ್ರ ಯಾದವ್ ಹಾಗೂ ಪ್ರಶಾಂತ್ ಭೂಷಣ್ (ಸಂಗ್ರಹ ಚಿತ್ರ) 
ದೇಶ

"ಸ್ವರಾಜ್ ಇಂಡಿಯಾ" ಪಕ್ಷ ಸ್ಥಾಪಿಸಿದ ಪ್ರಶಾಂತ್ ಭೂಷಣ್, ಯೋಗೇಂದ್ರ ಯಾದವ್

ಆಮ್‌ ಆದ್ಮಿ ಪಕ್ಷದಿಂದ ಉಚ್ಛಾಟನೆಗೊಂಡು ರಾಜಕೀಯದಿಂದ ದೂರ ಉಳಿದಿದ್ದ ಉಚ್ಚಾಟಿತ ನಾಯಕರಾದ ಯೋಗೇಂದ್ರ ಯಾದವ್‌ ಹಾಗೂ ಪ್ರಶಾಂತ್‌ ಭೂಷಣ್‌ "ಸ್ವರಾಜ್‌ ಇಂಡಿಯಾ' ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದಾರೆ.

ನವದೆಹಲಿ: ಆಮ್‌ ಆದ್ಮಿ ಪಕ್ಷದಿಂದ ಉಚ್ಛಾಟನೆಗೊಂಡು ರಾಜಕೀಯದಿಂದ ದೂರ ಉಳಿದಿದ್ದ ಉಚ್ಚಾಟಿತ ನಾಯಕರಾದ ಯೋಗೇಂದ್ರ ಯಾದವ್‌ ಹಾಗೂ ಪ್ರಶಾಂತ್‌ ಭೂಷಣ್‌ "ಸ್ವರಾಜ್‌  ಇಂಡಿಯಾ' ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದಾರೆ.

ತಮ್ಮ ನೂತನ ಪಕ್ಷ ದೆಹಲಿ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಲಿದೆಯಾದರೂ ಮುಂದಿನ ವರ್ಷ ನಡೆಯಲಿರುವ ಪಂಜಾಬ್‌ ವಿಧಾನಸ‌ಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಪ್ರಶಾಂತ್  ಭೂಷಣ್ ಹೇಳಿದ್ದಾರೆ.

ಭಾನುವಾರ ಪಕ್ಷದ ಸ್ಥಾಪನೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಯೋಗೇಂದ್ರ ಯಾದವ್‌ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. "ತಮ್ಮ  ಪಕ್ಷ ದೆಹಲಿಯಲ್ಲಿ "ಪರ್ಯಾಯ ರಾಜಕಾರಣ" ಮಾಡಲಿದೆಯೇ ಹೊರತು, ಆರವಿಂದ್‌ ಕೇಜ್ರಿವಾಲ್‌ರ ಆಮ್ ಆದ್ಮಿ ಪಕ್ಷದ ರೀತಿ ಅಡ್ಡದಾರಿ ಹಿಡಿಯುವುದಿಲ್ಲ ಎಂದು ತಿಳಿಸಿದ್ದಾರೆ. ಇದೇ ವೇಳೆ  ಇತ್ತೀಚೆಗೆ ಆಪ್ ಪಕ್ಷದಿಂದ ಉಚ್ಛಾಟನೆಗೊಂಡ ಸಂಸದ ಧರಮ್ ವೀರ್ ಗಾಂಧಿಯನ್ನು ತಾವು ಬೆಂಬಲಿಸುವುದಾಗಿ ಯೋಗೇಂದ್ರ ಯಾದವ್ ತಿಳಿಸಿದರು.

ಅಂತೆಯೇ ನಮ್ಮ ಕಾರ್ಯಕರ್ತರು ಯಾವುದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಲು ಸ್ವತಂತ್ರರಾಗಿದ್ದು, ಆಪ್ ರೀತಿ ಅವರನ್ನು ಕಟ್ಟಿಹಾಕುವ ಪ್ರಯತ್ನವನ್ನು ತಾವು ಮಾಡುವುದಿಲ್ಲ. ತಮ್ಮ  ನೂತನ ಪಕ್ಷ ಕೃಷಿಕ ಸಮಸ್ಯೆಯಿಂದ ಹಿಡಿದು ಭ್ರಷ್ಟಾಚಾರದ ವರೆಗಿನ ಎಲ್ಲ ಸಾಮಾಜಿಕ ಸಮಸ್ಯೆಗಳ ವಿರುದ್ಧ ಹೋರಾಡಲಿದೆ ಎಂದು ಯೋಗೇಂದ್ರ ಯಾದವ್ ಹೇಳಿದರು.

ಕಳೆದ ವರ್ಷ ಏಪ್ರಿಲ್‌ನಲ್ಲಿ ಆಪ್‌ನಿಂದ ಉಚ್ಚಾಟನೆಗೊಂಡ ಬಳಿಕ ಪ್ರಶಾಂತ್ ಭೂಷಣ್ ಹಾಗೂ ಯೋಗೇಂದ್ರ ಯಾದವ್ ಅವರು ಸ್ವರಾಜ್‌ ಅಭಿಯಾನ ಎಂಬ ಸಂಘಟನೆಯನ್ನು ಹುಟ್ಟು  ಹಾಕಿದ್ದರು. ಸ್ವರಾಜ್‌ ಅಭಿಯಾನ ಹಾಗೂ ಸ್ವರಾಜ್‌ ಇಂಡಿಯಾ ಎರಡೂ ಕೂಡ ಅಸ್ತಿತ್ವದಲ್ಲಿರಲಿವೆ. ಸ್ವರಾಜ್‌ ಇಂಡಿಯಾ ಮೂಲಕ ರಾಜಕಾರಣ ಮಾಡಲಾಗುವುದು. ಚುನಾವಣೆಗೆ ಸ್ಪರ್ಧಿಸಬೇಡಿ  ಎಂದು ಜನರು ತಮಗೆ ಹೇಳಿದರೆ ಸ್ವರಾಜ್‌ ಅಭಿಯಾನ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲಾಗುವುದ. ತಮ್ಮ ಈ ಸಂಘಟನೆಗೆ ಪ್ರಶಾಂತ್‌ ಭೂಷಣ್‌ ಮುಖ್ಯಸ್ಥರಾಗಿರಲಿದ್ದಾರೆ ಎಂದು  ಯಾದವ್‌  ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT