ಸಂಗ್ರಹ ಚಿತ್ರ 
ದೇಶ

ಧ್ವಜ ಗೌರವ ಕಾರ್ಯಕ್ರಮದ ವೇಳೆ ವಾಘಾ ಗಡಿಯಲ್ಲಿ ಕಲ್ಲು ತೂರಾಟ ನಡೆದಿದ್ದು ನಿಜ: ಬಿಎಸ್ಎಫ್ ಅಧಿಕಾರಿಗಳು

ಅಕ್ಟೋಬರ್ 2 ರಂದು ನಡೆದ ಉಭಯ ದೇಶಗಳ ಧ್ವಜ ಗೌರವ ಕಾರ್ಯಕ್ರಮದ ವೇಳೆ ವಾಘಾ ಗಡಿಯಲ್ಲಿ ಕಲ್ಲು ತೂರಾಟ ನಡೆದಿದ್ದು ನಿಜ ಎಂದು ಬಿಎಸ್ಎಫ್ ಅಧಿಕಾರಿಗಳು ಮಂಗಳವಾರ...

ನವದೆಹಲಿ: ಅಕ್ಟೋಬರ್ 2 ರಂದು ನಡೆದ ಉಭಯ ದೇಶಗಳ ಧ್ವಜ ಗೌರವ ಕಾರ್ಯಕ್ರಮದ ವೇಳೆ ವಾಘಾ ಗಡಿಯಲ್ಲಿ ಕಲ್ಲು ತೂರಾಟ ನಡೆದಿದ್ದು ನಿಜ ಎಂದು ಬಿಎಸ್ಎಫ್ ಅಧಿಕಾರಿಗಳು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಬಿಎಸ್ಎಪ್ ಡೈರೆಕ್ಟರ್ ಜನರಲ್ ಕೆ.ಕೆ. ಶರ್ಮಾ ಅವರು, ಅಕ್ಟೋಬರ್. 2ರಂದು ಎಂದಿನಂತೆ ವಾಘಾ ಗಡಿಯಲ್ಲಿ ಧ್ವಜ ಗೌರವ ಕಾರ್ಯಕ್ರಮವನ್ನು ನಡೆಸಲಾಗುತ್ತಿತ್ತು. ಈ ವೇಳೆ ಪಾಕಿಸ್ತಾನದ ಜನರು ಕಲ್ಲು ತೂರಾಟ ನಡೆಸಿ, ಕನಿಷ್ಟ 10 ನಿಮಿಷಗಳ ಕಾಲ ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದ್ದರು ಎಂದು ಹೇಳಿದ್ದಾರೆ.

ಭಾರತೀಯ ಸೇನೆ ಉಗ್ರರ ನೆಲೆಗಳ ಮೇಲೆ ಸೀಮಿತಿ ದಾಳಿ ನಡೆಸಿದ ನಂತರ ಅಂತರಾಷ್ಟ್ರೀಯ ಗಡಿಗಳಲ್ಲಿ ಉದ್ನಿಗ್ನ ವಾತಾವರಣ ನಿರ್ಮಾಣವಾಗಿದೆ. ಆದರೆ, ಯಾವುದೇ ರೀತಿಯ ಗುಂಡಿನ ಚಕಮಕಿಗಳು ನಡೆಯುತ್ತಿಲ್ಲ ಎಂದಿದ್ದಾರೆ.

ಇದೇ ವೇಳೆ ಸೀಮಿತ ದಾಳಿಯ ಬಳಿಕ ಗಡಿಯಲ್ಲಿರುವ ಗ್ರಾಮಸ್ಥರನ್ನು ಬೇರೆಡೆಗೆ ಸ್ಥಳಾಂತರಿಸಲಾಗುತ್ತಿದೆ ಎಂಬ ಸುದ್ದಿ ಕುರಿತಂತೆ ಸ್ಪಷ್ಟನೆ ನೀಡಿರುವ ಅವರು, ಗ್ರಾಮಸ್ಥರನ್ನು ಸ್ಥಳಾಂತರ ಮಾಡುವಂತೆ ಬಿಎಸ್ಎಫ್ ಯಾವುದೇ ಆದೇಶವನ್ನು ನೀಡಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT