ಆರ್ ಎಸ್ ಎಸ್ ಭಿನ್ನಮತೀಯ ನಾಯಕ ಸುಭಾಷ್ ವೆಲಿಂಗ್ಕರ್ 
ದೇಶ

ಆರ್ ಎಸ್ ಎಸ್ ಭಿನ್ನಮತೀಯ ನಾಯಕ ಸುಭಾಷ್ ವೆಲಿಂಗ್ಕರ್ ನ್ನು ಕೃಷ್ಣನಿಗೆ ಹೋಲಿಸಿದ ಶಿವಸೇನೆ

ಗೋವಾದ ಆರ್ ಎಸ್ ಎಸ್ ನ ಭಿನ್ನಮತೀಯ ನಾಯಕ ಸುಭಾಷ್ ವೆಲಿಂಗ್ಕರ್ ಅವರನ್ನು ಶಿವಸೇನೆ ಮಹಾಭಾರತದ ಶ್ರೀಕೃಷ್ಣನಿಗೆ ಹೋಲಿಸಿದ್ದು, ಬಿಜೆಪಿ- ಕಾಂಗ್ರೆಸ್ಸೇತರ ಪಕ್ಷವನ್ನು ಪಾಂಡವರಿಗೆ ಹೋಲಿಸಿದೆ.

ಪಣಜಿ: ಗೋವಾದ ಆರ್ ಎಸ್ ಎಸ್ ನ ಭಿನ್ನಮತೀಯ ನಾಯಕ ಸುಭಾಷ್ ವೆಲಿಂಗ್ಕರ್ ಅವರನ್ನು ಶಿವಸೇನೆ ಮಹಾಭಾರತದ ಶ್ರೀಕೃಷ್ಣನಿಗೆ ಹೋಲಿಸಿದ್ದು, ಬಿಜೆಪಿ- ಕಾಂಗ್ರೆಸ್ಸೇತರ ಪಕ್ಷವನ್ನು ಪಾಂಡವರಿಗೆ ಹೋಲಿಸಿದೆ.

ಮುಂದಿನ ವರ್ಷ ಗೋವಾದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಆರ್ ಎಸ್ ಎಸ್ ನ ವೆಲಿಂಗ್ಕರ್ ಬಿಜೆಪಿ- ಕಾಂಗ್ರೆಸ್ಸೇತರ ಪಕ್ಷಗಳನ್ನು ಅಧಿಕಾರದತ್ತ ಮುನ್ನಡೆಸಲಿದ್ದಾರೆ ಎಂದು ಗೋವಾ ಶಿವಸೇನೆಯ ಮುಖ್ಯಸ್ಥ ಸುದೀಪ್ ತಮನ್ಕರ್ ಹೇಳಿದ್ದಾರೆ.

ಬಿಜೆಪಿಯವರನ್ನು ಕೌರವರು ಹಾಗೂ ಬಿಜೆಪಿ- ಕಾಂಗ್ರೆಸ್ಸೇತರ ಪಕ್ಷಗಳನ್ನು ಪಾಂಡವರಿಗೆ ಹೋಲಿಸಿರುವ ಶಿವಸೇನೆ ಗೋವಾ ಚುನಾವಣೆಯಲ್ಲಿ ಮಹಾಭಾರತಕ್ಕೆ ಹೋಲಿಕೆ ಮಾಡಿದ್ದು ಕೃಷ್ಣ ಪಾಂಡವರನ್ನು ಗೆಲ್ಲಿಸಿದಂತೆ, ವೆಲಿಂಗ್ಕರ್ ಗೋವಾದಲ್ಲಿ ಬಿಜೆಪಿ, ಕಾಂಗ್ರೆಸ್ಸೇತರ ಪಕ್ಷಗಳನ್ನು ಗೆಲ್ಲಿಸಲಿದ್ದಾರೆ ಎಂದು ಸುದೀಪ್ ತಮನ್ಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಗೋವಾದಲ್ಲಿ ಬಿಜೆಪಿ ಹಾಗೂ ಬಿಜೆಪಿಯೊಂದಿಗಿನ ಪಕ್ಷಗಳು ಗೋವಾದಲ್ಲಿ ಸೋಲು ಕಾಣಲಿವೆ ಎಂದು ಶಿವಸೇನೆ ಅಭಿಪ್ರಾಯಪಟ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

SCROLL FOR NEXT