ಆರ್ ಎಸ್ ಎಸ್ ಭಿನ್ನಮತೀಯ ನಾಯಕ ಸುಭಾಷ್ ವೆಲಿಂಗ್ಕರ್ 
ದೇಶ

ಆರ್ ಎಸ್ ಎಸ್ ಭಿನ್ನಮತೀಯ ನಾಯಕ ಸುಭಾಷ್ ವೆಲಿಂಗ್ಕರ್ ನ್ನು ಕೃಷ್ಣನಿಗೆ ಹೋಲಿಸಿದ ಶಿವಸೇನೆ

ಗೋವಾದ ಆರ್ ಎಸ್ ಎಸ್ ನ ಭಿನ್ನಮತೀಯ ನಾಯಕ ಸುಭಾಷ್ ವೆಲಿಂಗ್ಕರ್ ಅವರನ್ನು ಶಿವಸೇನೆ ಮಹಾಭಾರತದ ಶ್ರೀಕೃಷ್ಣನಿಗೆ ಹೋಲಿಸಿದ್ದು, ಬಿಜೆಪಿ- ಕಾಂಗ್ರೆಸ್ಸೇತರ ಪಕ್ಷವನ್ನು ಪಾಂಡವರಿಗೆ ಹೋಲಿಸಿದೆ.

ಪಣಜಿ: ಗೋವಾದ ಆರ್ ಎಸ್ ಎಸ್ ನ ಭಿನ್ನಮತೀಯ ನಾಯಕ ಸುಭಾಷ್ ವೆಲಿಂಗ್ಕರ್ ಅವರನ್ನು ಶಿವಸೇನೆ ಮಹಾಭಾರತದ ಶ್ರೀಕೃಷ್ಣನಿಗೆ ಹೋಲಿಸಿದ್ದು, ಬಿಜೆಪಿ- ಕಾಂಗ್ರೆಸ್ಸೇತರ ಪಕ್ಷವನ್ನು ಪಾಂಡವರಿಗೆ ಹೋಲಿಸಿದೆ.

ಮುಂದಿನ ವರ್ಷ ಗೋವಾದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಆರ್ ಎಸ್ ಎಸ್ ನ ವೆಲಿಂಗ್ಕರ್ ಬಿಜೆಪಿ- ಕಾಂಗ್ರೆಸ್ಸೇತರ ಪಕ್ಷಗಳನ್ನು ಅಧಿಕಾರದತ್ತ ಮುನ್ನಡೆಸಲಿದ್ದಾರೆ ಎಂದು ಗೋವಾ ಶಿವಸೇನೆಯ ಮುಖ್ಯಸ್ಥ ಸುದೀಪ್ ತಮನ್ಕರ್ ಹೇಳಿದ್ದಾರೆ.

ಬಿಜೆಪಿಯವರನ್ನು ಕೌರವರು ಹಾಗೂ ಬಿಜೆಪಿ- ಕಾಂಗ್ರೆಸ್ಸೇತರ ಪಕ್ಷಗಳನ್ನು ಪಾಂಡವರಿಗೆ ಹೋಲಿಸಿರುವ ಶಿವಸೇನೆ ಗೋವಾ ಚುನಾವಣೆಯಲ್ಲಿ ಮಹಾಭಾರತಕ್ಕೆ ಹೋಲಿಕೆ ಮಾಡಿದ್ದು ಕೃಷ್ಣ ಪಾಂಡವರನ್ನು ಗೆಲ್ಲಿಸಿದಂತೆ, ವೆಲಿಂಗ್ಕರ್ ಗೋವಾದಲ್ಲಿ ಬಿಜೆಪಿ, ಕಾಂಗ್ರೆಸ್ಸೇತರ ಪಕ್ಷಗಳನ್ನು ಗೆಲ್ಲಿಸಲಿದ್ದಾರೆ ಎಂದು ಸುದೀಪ್ ತಮನ್ಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಗೋವಾದಲ್ಲಿ ಬಿಜೆಪಿ ಹಾಗೂ ಬಿಜೆಪಿಯೊಂದಿಗಿನ ಪಕ್ಷಗಳು ಗೋವಾದಲ್ಲಿ ಸೋಲು ಕಾಣಲಿವೆ ಎಂದು ಶಿವಸೇನೆ ಅಭಿಪ್ರಾಯಪಟ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT