ಕರ್ನಾಟಕ ಪರ ವಕೀಲ ನಾರಿಮನ್ (ಸಂಗ್ರಹ ಚಿತ್ರ) 
ದೇಶ

ಟೀಕೆಗಳ ನಡುವೆಯೂ ಬೆಂಬಲಿಸಿದ ಕರ್ನಾಟಕ ಜನತೆಗೆ ಧನ್ಯವಾದ: ನಾರಿಮನ್ ತಂಡ

ಕಾವೇರಿ ವಿಚಾರವಾಗಿ ಸುಪ್ರೀಂ ಕೋರ್ಟ್ ನಲ್ಲಿ ಸತತ ಹಿನ್ನಡೆಗಳ ನಡುವೆಯೇ ಮಂಗಳವಾರ ಪ್ರಕಟವಾದ ತೀರ್ಪು ಕೊಂಚ ಆಶಾದಾಯಕವಾಗಿದೆ ಎಂಬ ಅಭಿಪ್ರಾಯ ಮೂಡಿರುವಂತೆಯೇ ಕರ್ನಾಟಕದ ಪರ ವಾದ ಮಂಡಿಸಿದ್ದ ಫಾಲಿ ನಾರಿಮನ್ ನೇತೃತ್ವದ ಕಾನೂನು ತಂಡ ಕರ್ನಾಟಕ ಜನತೆಗೆ ಧನ್ಯವಾದ ಹೇಳಿದೆ.

ನವದೆಹಲಿ: ಕಾವೇರಿ ವಿಚಾರವಾಗಿ ಸುಪ್ರೀಂ ಕೋರ್ಟ್ ನಲ್ಲಿ ಸತತ ಹಿನ್ನಡೆಗಳ ನಡುವೆಯೇ ಮಂಗಳವಾರ ಪ್ರಕಟವಾದ ತೀರ್ಪು ಕೊಂಚ ಆಶಾದಾಯಕವಾಗಿದೆ ಎಂಬ ಅಭಿಪ್ರಾಯ  ಮೂಡಿರುವಂತೆಯೇ ಕರ್ನಾಟಕದ ಪರ ವಾದ ಮಂಡಿಸಿದ್ದ ಫಾಲಿ ನಾರಿಮನ್ ನೇತೃತ್ವದ ಕಾನೂನು ತಂಡ ಕರ್ನಾಟಕ ಜನತೆಗೆ ಧನ್ಯವಾದ ಹೇಳಿದೆ.

ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಕರ್ನಾಟಕ ಕಾನೂನು ತಂಡದ ಪರವಾಗಿ ಮಾತನಾಡಿದ ಮೋಹನ್ ವೆಂಕಟೇಶ್ ಕಾತರಕಿ "ಕಾವೇರಿ ಕಾನೂನು ಸಮರದ  ಅತ್ಯಂತ ಕಷ್ಟದ ಕಾಲದಲ್ಲಿ ತಮ್ಮ ಬೆನ್ನಿಗೆ ನಿಂತು ಬೆಂಬಲಿಸಿದ್ದೀರಿ. ಒತ್ತಡದ ನಡುವೆಯೂ ನಮ್ಮೊಂದಿಗೆ ನಿಂತ ಕರ್ನಾಟಕ ಜನತೆಗೆ ತಾವು ಮೊದಲು ಧನ್ಯವಾದ ಹೇಳುತ್ತೇವೆ. ಕೆಲ ಅಪಕ್ವ  ರಾಜಕಾರಣಿಗಳು ಮತ್ತು ವಕೀಲರು ಮಾಡಿರುವ ಟೀಕೆ ಟಿಪ್ಪಣಿಗಳು, ನಿಂದನೆ ಮತ್ತು ದುರ್ವರ್ತನೆಯಿಂದಾಗಿ ನಮ್ಮ ಕಾನೂನು ತಂಡವನ್ನು ಕೆಡವಿಹಾಕಿತ್ತು. ಅಲ್ಲದೆ ಪ್ರಕರಣವನ್ನು  ದುರ್ಬಲಗೊಳಿಸುವಂತೆ ಮಾಡಿತ್ತು. ನಮಗೆ ಯಾರ ಮೇಲೂ ದ್ವೇಷವಿಲ್ಲ ಎಂದು ಹೇಳಿದರು.

ಇದೇ ವೇಳೆ ಅಕ್ಟೋಬರ್ 18ರಂದು ನಡೆಯಲಿರುವ ವಿಚಾರಣೆ ತಮ್ಮ ಪಾಲಿಗೆ ಅತ್ಯಂತ ಮಹತ್ವದ್ದಾಗಿದ್ದು, ನ್ಯಾಯಮಂಡಳಿಯ ಐ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಿವಿಲ್ ಅರ್ಜಿಗಳ  ವಿಚಾರಣೆ ನಡೆಯಲಿದೆ. ಹೀಗಾಗಿ ಈ ಹಿಂದೆಂದಿಗಿಂತಲೂ ಅಂದು ನಡೆಯುವ ವಿಚಾರಣೆಗೆ ತಮ್ಮ ಬೆಂಬಲ ಅತ್ಯಗತ್ಯ ಎಂದು ಮೋಹನ್ ವೆಂಕಟೇಶ್ ಕಾತರಕಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT