ರಕ್ಷಣಾ ತಜ್ಞ ಎಸ್.ಆರ್. ಸಿನ್ಹೋ 
ದೇಶ

ಸೇನೆಯ ಸಮಗ್ರತೆಯನ್ನು ಪ್ರಶ್ನಿಸಿದ ಪ್ರತಿಪಕ್ಷಗಳ ವಿರುದ್ಧ ರಕ್ಷಣಾ ತಜ್ಞ ಕಿಡಿ

ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿ ಕುರಿತಂತೆ ಸಾಕ್ಷ್ಯಾಧಾರ ಕೇಳಿದರೆ, ಸೇನೆಯ ಸಮಗ್ರತೆಯನ್ನು ಪ್ರಶ್ನಿಸಿದ್ದಂತೆ. ದೇಶ ಉತ್ತಮ ನಾಯಕತ್ವದ ಅಡಿಯಲ್ಲಿರುವುದರಿಂದ ಇದಕ್ಕೆ ಹೆದರಿ ನಾಯಕರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆಂದು ರಕ್ಷಣಾ ತಜ್ಞ...

ನವದೆಹಲಿ: ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿ ಕುರಿತಂತೆ ಸಾಕ್ಷ್ಯಾಧಾರ ಕೇಳಿದರೆ, ಸೇನೆಯ ಸಮಗ್ರತೆಯನ್ನು ಪ್ರಶ್ನಿಸಿದ್ದಂತೆ. ದೇಶ ಉತ್ತಮ ನಾಯಕತ್ವದ ಅಡಿಯಲ್ಲಿರುವುದರಿಂದ ಇದಕ್ಕೆ ಹೆದರಿ ನಾಯಕರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆಂದು ರಕ್ಷಣಾ ತಜ್ಞ ಎಸ್.ಆರ್. ಸಿನ್ಹೋ ಅವರು ಬುಧವಾರ ಹೇಳಿದ್ದಾರೆ.
 
ಸೀಮಿತ ದಾಳಿ ಕುರಿತಂತೆ ಸಾಕ್ಷ್ಯಾಧಾರ ಒದಗಿಸುವಂತೆ ಪ್ರತಿಪಕ್ಷಗಳ ನಾಯಕರು ಆಗ್ರಹಿಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಭಾರತದಲ್ಲಿರುವ ಕೆಲ ಪಕ್ಷದ ನಾಯಕರು ಸೇನೆ ನಡೆಸಿದ ಸೀಮಿತ ದಾಳಿ ಕುರಿತಂತೆ ಪ್ರಶ್ನೆ ಏತ್ತುತ್ತಿರುವುದು ಹಾಗೂ ಸಾಕ್ಷ್ಯಾಧಾರ ಕೇಳುತ್ತಿರುವುದರಿಂದ ನಾಚಿಕೆಯಾಗುತ್ತಿದೆ. ಜನಪ್ರಿಯತೆ ಗಳಿಸುವ ಸಲುವಾಗಿ ಕೆಲ ನಾಯಕರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆಂದು ಅವರು ಹೇಳಿದ್ದಾರೆ.

ದೇಶ ಉತ್ತಮ ನಾಯಕನ ಅಡಿಯಲ್ಲಿ ಅಭಿವೃದ್ಧಿಗೊಳ್ಳುತ್ತಿದೆ ಎಂಬುದು ಅವರಿಗೆ ಗೊತ್ತಿದೆ. ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂಬುದೂ ಅವರಿಗೆ ಗೊತ್ತಿದೆ. ಹೀಗಾಗಿ ಈ ದಾರಿಯನ್ನು ಬಳಸಿಕೊಂಡು ಜನಪ್ರಿಯತೆಗಳಿಸಲು ಯತ್ನಿಸುತ್ತಿದ್ದಾರೆ. ಪಾಕಿಸ್ತಾನ ಕಣ್ಣಿನಲ್ಲಿ ಅವರು ಧನಾತ್ಮಕ ಪ್ರತಿಕ್ರಿಯೆಗಳನ್ನು ಗಳಿಸುವ ಮೂಲಕ ಗೆಲವು ಸಾಧಿಸುತ್ತಿದ್ದಾರೆಂದು ಸಿನ್ಹೋ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT