ರಕ್ಷಣಾ ತಜ್ಞ ಎಸ್.ಆರ್. ಸಿನ್ಹೋ 
ದೇಶ

ಸೇನೆಯ ಸಮಗ್ರತೆಯನ್ನು ಪ್ರಶ್ನಿಸಿದ ಪ್ರತಿಪಕ್ಷಗಳ ವಿರುದ್ಧ ರಕ್ಷಣಾ ತಜ್ಞ ಕಿಡಿ

ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿ ಕುರಿತಂತೆ ಸಾಕ್ಷ್ಯಾಧಾರ ಕೇಳಿದರೆ, ಸೇನೆಯ ಸಮಗ್ರತೆಯನ್ನು ಪ್ರಶ್ನಿಸಿದ್ದಂತೆ. ದೇಶ ಉತ್ತಮ ನಾಯಕತ್ವದ ಅಡಿಯಲ್ಲಿರುವುದರಿಂದ ಇದಕ್ಕೆ ಹೆದರಿ ನಾಯಕರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆಂದು ರಕ್ಷಣಾ ತಜ್ಞ...

ನವದೆಹಲಿ: ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿ ಕುರಿತಂತೆ ಸಾಕ್ಷ್ಯಾಧಾರ ಕೇಳಿದರೆ, ಸೇನೆಯ ಸಮಗ್ರತೆಯನ್ನು ಪ್ರಶ್ನಿಸಿದ್ದಂತೆ. ದೇಶ ಉತ್ತಮ ನಾಯಕತ್ವದ ಅಡಿಯಲ್ಲಿರುವುದರಿಂದ ಇದಕ್ಕೆ ಹೆದರಿ ನಾಯಕರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆಂದು ರಕ್ಷಣಾ ತಜ್ಞ ಎಸ್.ಆರ್. ಸಿನ್ಹೋ ಅವರು ಬುಧವಾರ ಹೇಳಿದ್ದಾರೆ.
 
ಸೀಮಿತ ದಾಳಿ ಕುರಿತಂತೆ ಸಾಕ್ಷ್ಯಾಧಾರ ಒದಗಿಸುವಂತೆ ಪ್ರತಿಪಕ್ಷಗಳ ನಾಯಕರು ಆಗ್ರಹಿಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಭಾರತದಲ್ಲಿರುವ ಕೆಲ ಪಕ್ಷದ ನಾಯಕರು ಸೇನೆ ನಡೆಸಿದ ಸೀಮಿತ ದಾಳಿ ಕುರಿತಂತೆ ಪ್ರಶ್ನೆ ಏತ್ತುತ್ತಿರುವುದು ಹಾಗೂ ಸಾಕ್ಷ್ಯಾಧಾರ ಕೇಳುತ್ತಿರುವುದರಿಂದ ನಾಚಿಕೆಯಾಗುತ್ತಿದೆ. ಜನಪ್ರಿಯತೆ ಗಳಿಸುವ ಸಲುವಾಗಿ ಕೆಲ ನಾಯಕರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆಂದು ಅವರು ಹೇಳಿದ್ದಾರೆ.

ದೇಶ ಉತ್ತಮ ನಾಯಕನ ಅಡಿಯಲ್ಲಿ ಅಭಿವೃದ್ಧಿಗೊಳ್ಳುತ್ತಿದೆ ಎಂಬುದು ಅವರಿಗೆ ಗೊತ್ತಿದೆ. ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂಬುದೂ ಅವರಿಗೆ ಗೊತ್ತಿದೆ. ಹೀಗಾಗಿ ಈ ದಾರಿಯನ್ನು ಬಳಸಿಕೊಂಡು ಜನಪ್ರಿಯತೆಗಳಿಸಲು ಯತ್ನಿಸುತ್ತಿದ್ದಾರೆ. ಪಾಕಿಸ್ತಾನ ಕಣ್ಣಿನಲ್ಲಿ ಅವರು ಧನಾತ್ಮಕ ಪ್ರತಿಕ್ರಿಯೆಗಳನ್ನು ಗಳಿಸುವ ಮೂಲಕ ಗೆಲವು ಸಾಧಿಸುತ್ತಿದ್ದಾರೆಂದು ಸಿನ್ಹೋ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT