ಕಂದಕಕ್ಕೆ ಉರುಳಿದ ಬಸ್: 4 ಸಾವು, 51 ಜನರಿಗೆ ಗಾಯ 
ದೇಶ

ಕಂದಕಕ್ಕೆ ಉರುಳಿದ ಬಸ್: 4 ಸಾವು, 51 ಜನರಿಗೆ ಗಾಯ

ಜಮ್ಮು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಕಂದಕಕ್ಕೆ ಬಸ್ ವೊಂದು ಉರುಳಿ ಬಿದ್ದಿದ್ದು, ಪರಿಣಾಮ ನಾಲ್ಕು ಮಂದಿ ಸಾವನ್ನಪ್ಪಿ 51 ಜನರಿಗೆ ಗಾಯವಾಗಿರುವ ಘಟನೆ...

ಉಧಂಪುರ: ಜಮ್ಮು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಕಂದಕಕ್ಕೆ ಬಸ್ ವೊಂದು ಉರುಳಿ ಬಿದ್ದಿದ್ದು, ಪರಿಣಾಮ ನಾಲ್ಕು ಮಂದಿ ಸಾವನ್ನಪ್ಪಿ 51 ಜನರಿಗೆ ಗಾಯವಾಗಿರುವ ಘಟನೆ ಗುರುವಾರ ನಡೆದಿದೆ.

ಉಧಂಪುರದಿಂದ ಘೋರ್ಡಿಗೆ ಹೋಗುತ್ತಿದ್ದ ಖಾಸಗಿ ಬಸ್ ಬರ್ಮೀನ್ ಪ್ರದೇಶದ ಬಳಿ ಹೋಗುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಕಂದಕ್ಕೆ ಉರುಳಿದೆ. ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದು, 51 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಬಸ್ ನಲ್ಲಿದ್ದ ಪ್ರಯಾಣಿಕರಲ್ಲಿ ಬಹುತೇಕರು ವಿದ್ಯಾರ್ಥಿಗಳೇ ಆಗಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.

ಪ್ರಸ್ತುತ ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನೆಗೆ ಪ್ರಮುಖ ಕಾರಣ ತಿಳಿದುಬಂದಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೃಷ್ಣನೂರು ಉಡುಪಿಯಲ್ಲಿ ಪ್ರಧಾನಿ ಮೋದಿ ರೋಡ್ ಶೋ: ಹೂಮಳೆ ಸುರಿಸಿ ಸ್ವಾಗತ ಕೋರಿದ ಜನತೆ..!

ಉಗ್ರರಿಗೆ ನೆರವು: ನಿಷೇಧಿತ ಜಮಾತ್-ಇ-ಇಸ್ಲಾಂಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಮ್ಮು-ಕಾಶ್ಮೀರ ಪೊಲೀಸರು ದಾಳಿ, ತೀವ್ರ ಶೋಧ

ಮೀರತ್​ ಕೊಲೆ ಪ್ರಕರಣ: ಹೆಣ್ಣು ಮಗುವಿಗೆ ರಾಧಾ ಎಂದು ಹೆಸರಿಟ್ಟ ಮುಸ್ಕಾನ್, DNA ಪರೀಕ್ಷೆಗೆ ಸೌರಭ್ ಕುಟುಂಬಸ್ಥರ ಆಗ್ರಹ

ಕೊಟ್ಟ ಮಾತಿನ ಕದನ: ಕಾಂಗ್ರೆಸ್‌ ಹೈಕಮಾಂಡ್‌ಗೆ ಈಗ ಹಗ್ಗದ ಮೇಲಿನ ನಡಿಗೆ! (ನೇರ ನೋಟ)

ಬೆಳಗಾವಿ: ಖಾನಾಪುರದಲ್ಲಿ ತಹಶಿಲ್ದಾರ್ ಕುರ್ಚಿಗಾಗಿ ಇಬ್ಬರು ಅಧಿಕಾರಿಗಳ ಕಚ್ಚಾಟ!

SCROLL FOR NEXT