ರಣದೀಪ್ ಸುರ್ಜೇವಾಲಾ 
ದೇಶ

ಭಾರತೀಯ ಸೇನೆಯನ್ನು ಅಮಿತ್ ಶಾ ಅವಮಾನಿಸಿದ್ದಾರೆ: ಕಾಂಗ್ರೆಸ್

ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ನಡೆಸಿದ ಸೀಮಿತ ದಾಳಿಗೆ ಸಂಬಂಧಿಸಿದಂತೆ ಆಡಳಿತರೂಢ ಬಿಜೆಪಿ ಹಾಗೂ ಪ್ರತಿಪಕ್ಷ...

ನವದೆಹಲಿ: ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ನಡೆಸಿದ ಸೀಮಿತ ದಾಳಿಗೆ ಸಂಬಂಧಿಸಿದಂತೆ ಆಡಳಿತರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವಿನ ವಾಕ್ಸರ ಮುಂದುವರೆದಿದ್ದು, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಭಾರತೀಯ ಸೇನೆಯನ್ನು ಅವಮಾನಿಸಿದ್ದು, ಈ ಕೂಡಲೇ ಅವರು ಸೇನೆ ಹಾಗೂ ಜನತೆಯ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಶುಕ್ರವಾರ ಆಗ್ರಹಿಸಿದೆ.
ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜವಾಲಾ ಅವರು, ಭಾರತೀಯ ಸೇನೆ ಮೇಲೆ ಕಾಂಗ್ರೆಸ್ ಗೆ ವಿಶ್ವಾಸವಿದೆ. ಆದರೆ ಸೀಮಿತ ದಾಳಿಯ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದ್ದು,  ಯೋಧರ ಬಲಿದಾನದ ವಿಚಾರದಲ್ಲೂ ಬಿಜೆಪಿ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.
ಇದೇ ವಿಚಾರ ಸಂಬಂಧ ಕಾಂಗ್ರೆಸ್ ಇಂದು ಎರಡನೇ ಬಾರಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.
ಈ ಸಂಬಂಧ ಇಂದು ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿದ್ದ ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಖೂನ್ ಕಿ ದಲಾಲಿ’ಎಂದು ಟೀಕಿಸಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಸಮರ್ಥಿಸಿಕೊಂಡಿದ್ದರು. ಅಲ್ಲದೆ ದೇಶದ ಜನತೆಗೆ ರಾಹುಲ್ ಹೇಳಿಕೆ ಹಿಂದಿನ ಭಾವನೆ ಅರ್ಥವಾಗುತ್ತದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ: ಷರತ್ತಿನ ಅರಿವಿದೆ, ಮುಂದಾಲೋಚನೆಯಿಂದ ಟೆಂಡರ್ ಆಹ್ವಾನ

ಒಮನ್ ಭೇಟಿ ವೇಳೆ ಮೋದಿ ಹೊಸ ಸ್ಟೈಲ್ ಬಗ್ಗೆ ಭಾರಿ ಚರ್ಚೆ: ಪ್ರಧಾನಿ ಕಿವಿಗೆ ಧರಿಸಿದ್ದೇನು?

ನನಗೆ ರಾಜಕೀಯ ನಿಶ್ಯಕ್ತಿ ಎಂಬುದೇ ಇಲ್ಲ, 5 ವರ್ಷ ನಾನೇ ಸಿಎಂ: ಬೆಳಗಾವಿ ಅಧಿವೇಶನದಲ್ಲಿ ಸಿದ್ದರಾಮಯ್ಯ ಪುನರುಚ್ಛಾರ

ಬೆಂಗಳೂರು: ಮನೆ ಬಳಿ ಆಟವಾಡ್ತಿದ್ದ ಬಾಲಕನಿಗೆ 'ಕಾಲಿನಿಂದ ಒದ್ದು' ವಿಕೃತಿ! ಪಕ್ಕದ ಮನೆಯ ಆರೋಪಿ ಬಂಧನ, ಬಿಡುಗಡೆ

ಸಂಸತ್ ಅಧಿವೇಶನಕ್ಕೆ ತೆರೆ: ಲೋಕಸಭೆ, ರಾಜ್ಯಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

SCROLL FOR NEXT