ಸಾಂದರ್ಭಿಕ ಚಿತ್ರ 
ದೇಶ

ಆಡಳಿತದಲ್ಲಿ ಪಾರದರ್ಶಕತೆ ತರಲು ನಾಗರಿಕ ಸಮಾಜ, ಪತ್ರಕರ್ತರ ಪಾಲ್ಗೊಳ್ಳುವಿಕೆಗೆ ಸಿಬ್ಬಂದಿ ಇಲಾಖೆ ಕ್ರಮ

ಸರ್ಕಾರದ ಕೆಲಸ, ಕಾರ್ಯಗಳಲ್ಲಿ ಪಾರದರ್ಶಕತೆ ಮತ್ತು ನಿಖರತೆಯನ್ನು ತರಲು ಮಾಹಿತಿ ಹಕ್ಕು...

ನವದೆಹಲಿ: ಸರ್ಕಾರದ ಕೆಲಸ, ಕಾರ್ಯಗಳಲ್ಲಿ ಪಾರದರ್ಶಕತೆ ಮತ್ತು ನಿಖರತೆಯನ್ನು ತರಲು ಮಾಹಿತಿ ಹಕ್ಕು ಕಾಯ್ದೆಯನ್ನು(ಆರ್ ಟಿಐ) ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸರ್ಕಾರ ನೋಡುತ್ತಿದ್ದು ಈ ಉದ್ದೇಶಕ್ಕಾಗಿ ನಾಗರಿಕ ಸಮಾಜ ಮತ್ತು ಪತ್ರಕರ್ತರ ಗುಂಪಿನಿಂದ ಪ್ರತಿನಿಧಿಗಳ ಸಹಾಯವನ್ನು ಪಡೆಯಲಾಗುತ್ತಿದೆ.
ಸರ್ಕಾರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ಮೂಲಕ ಮಾಧ್ಯಮ, ಪತ್ರಕರ್ತರು ಮತ್ತು ನಾಗರಿಕ ಸಮಾಜ ಸಂಸ್ಥೆಗಳ ಮೂಲಕ ಅಲ್ಪಾವಧಿಯ ಫೆಲೋಶಿಪ್ ನೀಡಲು ನಿರ್ಧರಿಸಿದೆ. ಮಾಹಿತಿ ಹಕ್ಕು ಕಾಯ್ದೆಗೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ನೋಡಲ್ ಸಂಸ್ಥೆಯಾಗಿದೆ.
ಮೂಲಗಳ ಪ್ರಕಾರ, ಆರ್ ಟಿಐ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಪ್ರಯತ್ನ ನಡೆಸಲಾಗುತ್ತದೆ. ಕಾಯ್ದೆಯ ಪ್ರಮುಖ ಉದ್ದೇಶ ಸರ್ಕಾರದ ಆಡಳಿತ, ಕಾರ್ಯಕ್ರಮಗಳಲ್ಲಿ ಹೆಚ್ಚು ಪಾರದರ್ಶಕತೆ ಮತ್ತು ನಿಖರತೆ ತರುವುದು, ಸರ್ಕಾರದ ಅನೇಕ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದು, ತರಬೇತಿ, ಇ-ಆಡಳಿತದ ಉದ್ದೇಶಗಳನ್ನು ಈಡೇರಿಸುವುದಾಗಿದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT