ಸಾಂದರ್ಭಿಕ ಚಿತ್ರ 
ದೇಶ

ಪಕ್ಷಗಳ ಚಿಹ್ನೆ ಪ್ರಚಾರಕ್ಕಾಗಿ ಸಾರ್ವಜನಿಕ ಹಣ, ಸ್ಥಳ ಬಳಸುವ ಹಾಗಿಲ್ಲ: ಚುನಾವಣಾ ಆಯೋಗ ಆದೇಶ

ಸಾರ್ವಜನಿಕ ಹಣವನ್ನು ಮತ್ತು ಸರ್ಕಾರದ ಕಾರ್ಯತಂತ್ರಗಳನ್ನು ಪ್ರಚಾರಕ್ಕಾಗಿ ಯಾವುದೇ ರಾಜಕೀಯ...

ನವದೆಹಲಿ: ಸಾರ್ವಜನಿಕ ಹಣವನ್ನು ಮತ್ತು ಸರ್ಕಾರದ ಕಾರ್ಯತಂತ್ರಗಳನ್ನು ಪ್ರಚಾರಕ್ಕಾಗಿ ಯಾವುದೇ ರಾಜಕೀಯ ಪಕ್ಷಗಳು ಬಳಸಿಕೊಳ್ಳುವುದಕ್ಕೆ ಅವಕಾಶವಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.
ರಾಜಕೀಯ ಪಕ್ಷಗಳ ಮತ್ತು ಚುನಾವಣಾ ಆಯೋಗ ಪಕ್ಷಕ್ಕೆ ಮಂಜೂರು ಮಾಡಿದ ಪಕ್ಷದ ಚಿಹ್ನೆಯ ಪ್ರಚಾರಕ್ಕಾಗಿ ಸಾರ್ವಜನಿಕ ಹಣ, ಸ್ಥಳ ಅಥವಾ ಸರ್ಕಾರದ ಕಾರ್ಯತಂತ್ರಗಳನ್ನು ಯಾವುದೇ ರಾಜಕೀಯ ಪಕ್ಷಗಳು ಬಳಸಿಕೊಳ್ಳಬಾರದು ಎಂದು ಆಯೋಗ ನಿರ್ದೇಶನ ನೀಡಿದೆ. ಈ ಕುರಿತು ಚುನಾವಣಾ ಆಯೋಗ ಗುರುತಿಸಲ್ಪಟ್ಟ ರಾಷ್ಟ್ರ ಮತ್ತು ರಾಜ್ಯಗಳ ರಾಜಕೀಯ ಪಕ್ಷಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದೆ.
ಯಾವುದೇ ರಾಜಕೀಯ ಪಕ್ಷಗಳ ಮ್ತತು ಅವುಗಳ ಚುನಾವಣಾ ಚಿಹ್ನೆಗಳ ಪ್ರಚಾರಕ್ಕಾಗಿ ಸಾರ್ವಜನಿಕ ಸ್ಥಳ, ಹಣವನ್ನು ಬಳಸುವುದು ಉಚಿತ ಮತ್ತು ನ್ಯಾಯಯುತ ಚುನಾವಣೆ ಪರಿಕಲ್ಪನೆಗೆ ವಿರುದ್ಧವಾಗಿರುತ್ತದೆ. ಇದಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಚುನಾವಣೆ ಗುರುತು(ಮೀಸಲಾತಿ ಮತ್ತು ಹಂಚುವಿಕೆ) ಆದೇಶ 1968ರ 16ಎಯಡಿ ಕಾನೂನು ಉಲ್ಲಂಘನೆಯಾಗುತ್ತದೆ. 
ಉತ್ತರ ಪ್ರದೇಶದಲ್ಲಿ ಮಾಯಾವತಿ ಸರ್ಕಾರದ ಅವಧಿಯಲ್ಲಿ ಬಹುಜನ ಸಮಾಜ ಪಕ್ಷದ ಚಿಹ್ನೆಯಾದ ಆನೆಯ ಮೂರ್ತಿಯನ್ನು ರಾಜ್ಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಸ್ಥಾಪಿಸಿದ್ದನ್ನು ಪ್ರಶ್ನಿಸಿ ಚುನಾವಣಾ ತಂಡವೊಂದು ಸಲ್ಲಿಸಿದ್ದ ಅರ್ಜಿಯನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT